ರಾಜ್ಯದಲ್ಲಿ ಆಳುವ ಪಕ್ಷದ 25 ಎಂಪಿಗಳು ಯಾವ ಪುರುಷಾರ್ಥಕ್ಕೆ: ಶ್ರೀಕಾಂತ್ ಸಾಲ್ಯಾನ್
ಬೆಂಗಳೂರು, ಮೇ 3, ರಾಜ್ಯದಲ್ಲಿ ಆಡಳಿತ ಪಕ್ಷದ 25 ಸಂಸದರಿದ್ದರೂ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಊರಿಗೆ ಕಳಿಸಲು ಸಾಧ್ಯವಾಗದಿರುವುದು ನಾಚಿಕೆಗೇಡು. ನಮ್ಮ ಪಕ್ಕದ ರಾಜ್ಯವಾದ ಕೇರಳವನ್ನಾದರು ನೋಡಿ ಸ್ವಲ ಕಲಿಯಬಾರದೇ. ಕೇರಳದಿಂದ ಇತರೆ ರಾಜ್ಯದ ಕಾರ್ಮಿಕರನ್ನು ಸ್ಪೆಷಲ್ ರೈಲು ಸೌಕರ್ಯ ಮಾಡಿ ಕಳುಹಿಸಿದ್ದಾರೆ. ಆದರೆ ನಮ್ಮ ರಾಜ್ಯ ಸರಕಾರ ಈ ಬಗ್ಗೆ ಗಂಭೀರವಾದ ಚಿಂತನೆ ನಡೆಸದಿರುವುದು ವಿಷಾದಕರವಾಗಿದೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯದ ಉಪಾಧ್ಯಕ್ಷ ಶ್ರೀಕಾಂತ್ ಸಾಲ್ಯಾನ್ ಕಿಡಿಕಾರಿದ್ದಾರೆ.ಕಾರ್ಮಿಕರ ಕಲ್ಯಾಣ ನಿಧಿಯ ಮೊತ್ತವನ್ನು ಈ ಸಂಧರ್ಭದಲ್ಲಿ ಉಪಯೋಗಿಸಿ ಕಾರ್ಮಿಕರ ಸೇವೆ ಮಾಡಬೇಕಾದ್ದು ಸರಕಾರದ ಕರ್ತವ್ಯವೆಂಬುದನ್ನು ಸರಕಾರ ಮರೆತಂದಿದೆ.ಕೇವಲ ಕಾರ್ಮಿಕರ ದಿನಾಚರಣೆಯ ಸಂಧರ್ಭದಲ್ಲಿ ಶುಭಾಶಯ ಹೇಳುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಕಾರ್ಮಿಕರ ಮೇಲೆ ಪ್ರೀತಿ ಕರುಣೆ ಇದ್ದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರ ಕೈಹಿಡಿಯಬೇಕಾಗಿದೆ. ಆದ್ದರಿಂದ ಸರಕಾರವು ಕೂಡಲೇ ರಾಜ್ಯದಲ್ಲಿರುವ ದೇಶದ ವಿವಿಧ ಭಾಗದ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರಿಗೆ ತಲುಪಿಸಬೇಕೆಂದು ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 