ಪಹಲ್ಗಾಮ್ ಭಯೊತ್ಪಾದಕರ ದಾಳಿಗೆ 28 ಜನರ ಸಾವು: ಡಿವೈಎಎಫ್ಐ ಖಂಡನೆ
28 people killed in Pahalgam terrorist attack: DYAFI condemns
ಗಜೇಂದ್ರಗಡ 23: ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸರನ್ ಕಣಿವೆಯಲ್ಲಿ ಮಂಗಳವಾರ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ( ಡಿವೈಎಎಫ್ಐ) ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಡಿವೈಎಎಫ್ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ
ಮಾತನಾಡಿಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರಕಾರ ಖಾತ್ರಿಪಡಿಸಬೇಕು.
ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಎಫ್ಐ ಸಂತಾಪಗಳನ್ನು ಸಲ್ಲಿಸುತ್ತದೆ. ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ ಎಂದು ಹೇಳುತ್ತಲೇಯಿದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಸರಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 