ಎನ್ಕೌಂಟರ್ನಲ್ಲಿ 31 ನಕ್ಸಲರು ಹತ: ಇಬ್ಬರು ಸಿಬ್ಬಂದಿಯೂ ಸಾವು
31 Naxals killed in encounter: Two personnel also killed
ಬಿಜಾಪುರ 09: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಎಡಪಂಥೀಯ ತೀವ್ರಗಾಮಿ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆ ವೇಳೆ ನಡೆದ ಎನ್ಕೌಂಟರ್ನಲ್ಲಿ 31 ನಕ್ಸಲರು ಹತರಾಗಿದ್ದಾರೆ, ವಿಶೇಷ ಕಾರ್ಯಪಡೆಯ ಇಬ್ಬರು ಸಿಬ್ಬಂದಿಯೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಇಂದ್ರಾವತಿ ನ್ಯಾಷನಲ್ ಪಾರ್ಕ್ ಸಮೀಪದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲ್ ನಿಗ್ರಹ ಪಡೆ ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ ಎಂದು ಬಸ್ತಾರ್ ವಲಯದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರ್ ರಾಜ್ ಪಿ. ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ಕರೆಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಈ ವರ್ಷ ಸಾವಿಗೀಡಾದ ಒಟ್ಟು 81 ನಕ್ಸಲರಲ್ಲಿ, 65 ಮಂದಿಯನ್ನು ಬಸ್ತಾರ್ ವಲಯದಲ್ಲೇ ಕೊಲ್ಲಲಾಗಿದೆ.
ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಆಯುಧಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 