ಮಹಾಲಕ್ಷ್ಮೀ ಮಹಿಳಾ ಮಂಡಳದ 34 ನೇ ವಾರ್ಷಿಕ ಸಮಾರಂಭ
ಬೆಳಗಾವಿ 25: ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಬೆಳೆಯಬೇಕಾದರೆ ಮಹಾಲಕ್ಷ್ಮೀ ಮಹಿಳಾ ಮಂಡಳ ಮಾದರಿಯಲ್ಲೇ , ಹೆಚ್ಚಿನ ಸಂಘಟನೆಗಳು ಸಮಾಜ ಸೇವೆಗೆ ಮುಂದಾಗಬೇಕು ಎಂದು ಹಿರಿಯ ಸಾಹಿತಿ, ಶಿಕ್ಷಕಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು.
ಮಹಾಲಕ್ಷ್ಮೀ ಮಹಿಳಾ ಮಂಡಳದ 34 ನೇ ವಾರ್ಷಿಕ ಸಮಾರಂಭ ಇದೇ 21 ವಿಜೃಂಭಣೆಯಿಂದ ಜರುಗಿತು. ಮಹಿಳಾ ಮಂಡಳ 34 ವರ್ಷಗಳಿಂದ ಸಮಾಜ ಸೇವೆಗಾಗಿ ನಿರಂತರ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ. ಈ ಮಹಿಳಾ ಸಂಘಟನೆ ಇಷ್ಟೊಂದು ಗಟ್ಟಿಯಾಗಿ ನಿಂತು ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೀಗಾಗಿ ಮಹಿಳೆಯರ ಶಕ್ತಿ ಇನ್ನಷ್ಟೂ ಬಲಗೊಳ್ಳಬೇಕಾದರೆ ಹೆಚ್ಚಿನ ಸಂಘಟನೆ ಸಮಾಜ ಸೇವೆ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.
ಒಂದು ಸಂಘಟನೆ ಸಮಾಜದಲ್ಲಿ ಗಟ್ಟಿಯಾಗಿ ನೆಲ ನಿಂತಾಗ ಮಾತ್ರ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಅಭಿವೃದ್ಧಿಯನ್ನು ಸಾಧಿಸಲು ಅನುಕೂಲವಾಗಿದೆ. ಹೆಚ್ಚು ಮಕ್ಕಳ ಶಿಕ್ಷಣಕ್ಕೆ ಅತಿ ಮುಖ್ಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಮಾಜವನ್ನು ಒಗ್ಗೂಡಿಸಲು ಸಂಘಟನೆ ಸಹಕಾರಿಯಾಗಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮಂಡಳದ ಅಧ್ಯಕ್ಷೆ ರಾಜೇಶ್ವರಿ ಕಲೂತಿ ಸ್ವಾಗತಿದರು. ಸುನೀತಾ ಪಾಟೀಲ ಪ್ರಾಸ್ತವಿಕವಾಗಿ ಮಾತನಾಡಿದರು. ಉಪಾಧ್ಯಕ್ಷೆ ಲತಾ ಕರಡಿಗುದ್ದಿ ಅತಿಥಿಯ ಪರಿಚಯಿಸಿದರು. ಶೋಭಾ ಪಾಟೀಲ, ಈ ಕಾರ್ಯಕ್ರಮದಲ್ಲಿ ಮಹಿಳಾ ಮಂಡಳದಿಂದ ಶೈಲಜಾ ಭಿಂಗೆಯರಿಗೆ ಸನ್ಮಾನಿಸಲಾಯಿತು. ಶಾರದಾ ಪಾಟೀಲ, ವಿದ್ಯಾ ಗೌಡರ ಹಾಗೂ ಇತರರು ಇದ್ದರು. ಲಕ್ಷ್ಮೀ ಪಾಟೀಲ ನಿರೂಪಿಸಿದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 