ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ
354th Aradhana Mahotsav of Raghavendra Swami
ಕೊಪ್ಪಳ 13: ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಅಂಗವಾಗಿ ಇಲ್ಲಿನ ರಾಯರ ಮಠದಲ್ಲಿ ಸೋಮವಾರ ವಿವಿಧ ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದವು.ಮಧ್ಯಾರಾಧನೆ ಅಂಗವಾಗಿ ರಾಯರ ವೃಂದಾವನಕ್ಕೆ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ, ಅಲಂಕಾರ, ತೀರ್ಥಪ್ರಸಾದ ಸೇರಿದಂತೆ ಜರುಗಿದವು.
ಸಂಜೆ ಹುಬ್ಬಳ್ಳಿಯ ವಿಜಯಕುಮಾರ ಪಾಟೀಲ ಅವರಿಂದ ಭಕ್ತಿ ಸಂಗೀತ, ಪಂಡಿತ್ ಪುರಸ್ಕಾರ, ರಾಘವೇಂದ್ರ ವಿಜಯ ಪ್ರವಚನ ಮಂಗಲ ಮಹೋತ್ಸವ ಇದ್ದವು. ರಾತ್ರಿ ನಡೆದ ಲಘು ರಥೋತ್ಸವದ ಸುತ್ತಲೂ ಸಾಗಿ ಭಕ್ತರು ತಮ್ಮ ಭಕ್ತಿ ಸಮರ್ಿಸಿದರು. ಈ ವೇಳೆ ರಾಯರ ಹಾಡುಗಳನ್ನು ಸ್ತುತಿಸಲಾಯಿತು. ಬಳಿಕ ಮಹಿಳೆಯರು ಕೋಲಾಟವಾಡಿದರು. ತೊಟ್ಟಿಲು ಸೇವೆಯಲ್ಲಿ ಮಹಿಳೆಯರು ತೊಟ್ಟಿಲು ತೂಗಿ ನಮಸ್ಕರಿಸಿದರು. ಎರಡು ದಿನಗಳಿಂದ ನಡೆಯುತ್ತಿರುವ ಆರಾಧನೆಯಲ್ಲಿ ಎಲ್ಲ ಜಾತಿಗಳ ಸಾವಿರಾರು ಸಂಖ್ಯೆಯ ಭಕ್ತರು ಮಠದಲ್ಲಿ ಬಂದು ಪ್ರಸಾದ ಸೇವಿಸಿದರು. ಮಧ್ಯಾಹ್ನ 1.30ರಿಂದ ಆರಂಭವಾದ ಪ್ರಸಾದ ಸಂಜೆ ತನಕ ನಡೆಯಿತು.
ಗೌರವ ಸನ್ಮಾನ: ಭಾನುವಾರ ರಾತ್ರಿ ನಡೆದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಪತ್ರಿಕಾರಂಗ ಮತ್ತು ಹೋರಾಟ ಕ್ಷೇತ್ರದ ಸಾಧನೆಗೆ ಸಂತೋಷ ದೇಶಪಾಂಡೆ, ಶಂಕರ ಬಿನ್ನಾಳ (ಸಂಗೀತ), ಜಪದ ಮೇಲೆ ಪಿ.ಎಚ್ಡಿ ಮಾಡಿದ ಸಾಧಕ ಹನುಮಂತರಾವ್ ಕುಲಕರ್ಣಿ ಮತ್ತು ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ಸುನಿತಾ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 