ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ
354th Aradhana Mahotsav of Raghavendra Swami
ಕೊಪ್ಪಳ 13: ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಅಂಗವಾಗಿ ಇಲ್ಲಿನ ರಾಯರ ಮಠದಲ್ಲಿ ಸೋಮವಾರ ವಿವಿಧ ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದವು.ಮಧ್ಯಾರಾಧನೆ ಅಂಗವಾಗಿ ರಾಯರ ವೃಂದಾವನಕ್ಕೆ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ, ಅಲಂಕಾರ, ತೀರ್ಥಪ್ರಸಾದ ಸೇರಿದಂತೆ ಜರುಗಿದವು.
ಸಂಜೆ ಹುಬ್ಬಳ್ಳಿಯ ವಿಜಯಕುಮಾರ ಪಾಟೀಲ ಅವರಿಂದ ಭಕ್ತಿ ಸಂಗೀತ, ಪಂಡಿತ್ ಪುರಸ್ಕಾರ, ರಾಘವೇಂದ್ರ ವಿಜಯ ಪ್ರವಚನ ಮಂಗಲ ಮಹೋತ್ಸವ ಇದ್ದವು. ರಾತ್ರಿ ನಡೆದ ಲಘು ರಥೋತ್ಸವದ ಸುತ್ತಲೂ ಸಾಗಿ ಭಕ್ತರು ತಮ್ಮ ಭಕ್ತಿ ಸಮರ್ಿಸಿದರು. ಈ ವೇಳೆ ರಾಯರ ಹಾಡುಗಳನ್ನು ಸ್ತುತಿಸಲಾಯಿತು. ಬಳಿಕ ಮಹಿಳೆಯರು ಕೋಲಾಟವಾಡಿದರು. ತೊಟ್ಟಿಲು ಸೇವೆಯಲ್ಲಿ ಮಹಿಳೆಯರು ತೊಟ್ಟಿಲು ತೂಗಿ ನಮಸ್ಕರಿಸಿದರು. ಎರಡು ದಿನಗಳಿಂದ ನಡೆಯುತ್ತಿರುವ ಆರಾಧನೆಯಲ್ಲಿ ಎಲ್ಲ ಜಾತಿಗಳ ಸಾವಿರಾರು ಸಂಖ್ಯೆಯ ಭಕ್ತರು ಮಠದಲ್ಲಿ ಬಂದು ಪ್ರಸಾದ ಸೇವಿಸಿದರು. ಮಧ್ಯಾಹ್ನ 1.30ರಿಂದ ಆರಂಭವಾದ ಪ್ರಸಾದ ಸಂಜೆ ತನಕ ನಡೆಯಿತು.
ಗೌರವ ಸನ್ಮಾನ: ಭಾನುವಾರ ರಾತ್ರಿ ನಡೆದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಪತ್ರಿಕಾರಂಗ ಮತ್ತು ಹೋರಾಟ ಕ್ಷೇತ್ರದ ಸಾಧನೆಗೆ ಸಂತೋಷ ದೇಶಪಾಂಡೆ, ಶಂಕರ ಬಿನ್ನಾಳ (ಸಂಗೀತ), ಜಪದ ಮೇಲೆ ಪಿ.ಎಚ್ಡಿ ಮಾಡಿದ ಸಾಧಕ ಹನುಮಂತರಾವ್ ಕುಲಕರ್ಣಿ ಮತ್ತು ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ಸುನಿತಾ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 