ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ
354th Aradhana Mahotsav of Raghavendra Tirtha
ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ
ಕಂಪ್ಲಿ 10: ಪಟ್ಟಣದ ಎಸ್ಎನ್ಪೇಟೆಯ ಜಗದ್ಗುರು ಶ್ರೀಮನ್ ಮದ್ವಾಚಾರ್ಯರ ಮೂಲ ಮಹಾಸಂಸ್ಥಾನದ ನಂಜನಗೂರು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಭಾನುವಾರದಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆಯಿಂದ ಜರುಗಿದವು.
ಇಲ್ಲಿನ ದೇವಸ್ಥಾನದ ಸನ್ನಿಧಾನದಲ್ಲಿ ಬೆಳಿಗ್ಗೆ ಅಷ್ಟ್ರೋತ್ತರ ಸಹಿತ ಫಲ ಪಂಚಾಮೃತ, ಪುಷ್ಪಾಲಂಕಾರ, ಕನಕಾಭಿಷೇಕ, ಮಧ್ಯಾಹ್ನದ ಹಸ್ತೋದಕ, ಮಹಾಮಂಗಳಾರತಿ ನೆರವೇರಿದವು. ಇಲ್ಲಿನ ಆರಾಧನಾ ಮಹೋತ್ಸವ ಅಂಗವಾಗಿ ಭಕ್ತರು ಆಗಮಿಸಿ, ದರ್ಶನ ಪಡೆದುಕೊಂಡರು. ನಂತರ ಶ್ರೀಗುರುರಾಜ ಸೇವಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿಯವರಿಂದ ತೀರ್ಥ ಪ್ರಸಾದ ವ್ಯವಸ್ಥೆ ಮಾಡಿದದರು. ಭಕ್ತರು ಫಲ-ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಸಂಜೆ ರಥೋತ್ಸವ, ಸ್ವಸ್ತಿವಾಚನ, ತೊಟ್ಟಲು ಸೇವಾ, ಮಹಾಮಂಗಳಾರತಿ ನೆರವೇರಿದವು.
ಈ ಸಂದರ್ಭದಲ್ಲಿ ಶ್ರೀಗುರುರಾಜ ಸೇವಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿಯವರು ಸೇರಿದಂತೆ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 