38ನೇ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮ
38th Sharana Samskruti Utsava
ರಾಯಬಾಗ 13: ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತಿರುವ ಮಠಮಾನ್ಯಗಳ ಜೊತೆಗೆ ಎಲ್ಲರೂ ಕೈಜೋಡಿಸಬೇಕೆಂದು ಬಿಳಗಿ ಕೃಷಿ ಪಂಡಿತ ಸಿದ್ದಪ್ಪ ಬಿದರಿ ಹೇಳಿದರು.
ಶನಿವಾರ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ 38ನೇ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ರೈತರು ಹಣದ ವ್ಯಾಮೋಹಕ್ಕೆ ಒಳಗಾಗಿ, ಬೆಳೆಗಳಿಗೆ ವಿಷಯುಕ್ತ ರಾಸಾಯನಿಕ ಹಾಕಿ ಭೂಮಾತೆಗೆ ವಿಷ ಉಣ್ಣಿಸುವ ಕಾರ್ಯದಲ್ಲಿ ತೊಡಗಿರುವುದು ಅತ್ಯಂತ ಖೇದಕವಾಗಿದೆ. ಭೂಮಿ ಇದ್ದರೆ ರೈತ ಉಳಿಯುತ್ತಾನೆ, ರೈತ ಉಳಿದರೆ ಈ ಜಗತ್ತು ಉಳಿಯಲು ಸಾಧ್ಯವೆಂದು ಹೇಳಿದರು. ಜಗತ್ತಿಗೆ ಅನ್ನ ನೀಡುವ ರೈತರಿಗೆ ಹೆಣ್ಣು ಕೊಡಲು ಹಿಂದೆ ಮುಂದೆ ನೋಡುತ್ತಿರುವುದು ಶೋಚನೀಯ ವಿಷಯವಾಗಿದೆ ಎಂದರು.
ಮೊಳವಾಡದ ಹರಿಭಕ್ತ ಸುಭಾಷ ಶೇವಾಳಗಿ ಮಾತನಾಡಿ, ಜಗತ್ತಿನ ಕಲ್ಯಾಣಕ್ಕಾಗಿ ಶ್ರೀಗಳು ಶರಣ ಸಂಸ್ಕೃತಿ ಉತ್ಸವ ಹಮ್ಮಿಕೊಂಡಿರುವುದು ಅತ್ಯಂತ ಸಂತೋಷದ ವಿಷಯ. ಸಕಲ ಜೀವರಾಶಿಗಳಿಗೆ ಆಶ್ರಯವಾಗಿರುವ ಭೂಮಾತೆಯನ್ನು ಸಂರಕ್ಷಿಸುವ ಕೆಲಸ ಎಲ್ಲರೂ ಕೂಡಿ ಮಾಡಬೇಕಾಗಿದೆ. ಮಣ್ಣಿನಲ್ಲಿ ಹೊನ್ನು ಬೆಳೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಂಚಲಿಂಗೇಶ್ವರ ಮಠದ ವೀರಭದ್ರ ಸ್ವಾಮೀಜಿ, ಓಂಕಾರ ಆಶ್ರಮದ ಶಿವಶಂಕರ ಸ್ವಾಮೀಜಿ, ಭೃಮರಾಂಬಿಕಾ ಶಿವಯೋಗಿ, ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ ಪಾಟೀಲ, ವಕೀಲರಾದ ಎಲ್.ಬಿ.ಚೌಗಲಾ, ಷಣ್ಮುಖ ಮಾಳಿ ಸೇರಿ ಅನೇಕ ಭಕ್ತಾದಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 