4 ಉಗ್ರರ ಹತ್ಯೆ, ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ
ಶ್ರೀನಗರ 07: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು ಇನ್ನು ಗುಂಡಿನ ದಾಳಿಯಲ್ಲಿ ಮೇಜರ್ ಸೇರಿದಂತೆ ನಾಲ್ವರು ಭಾರತೀಯ ಯೋಧರು
ಹುತಾತ್ಮರಾಗಿದ್ದಾರೆ.
ಕಳೆದ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಸದ್ಯ ಉಗ್ರರ ವಿರುದ್ಧದ ಕಾಯರ್ಾಚರಣೆ ಮುಂದುವರೆದಿದ್ದು ಅಡಗಿ ಕುಳಿತಿರುವ ಉಗ್ರರ ದಮನಕ್ಕೆ ಭಾರತೀಯ ಸೇನೆ ಮುಂದಾಗಿದೆ. ಸದ್ಯ ಇಬ್ಬರ ಉಗ್ರರ ಮೃತದೇಹವನ್ನು ಸೇನೆ ವಶಪಡಿಸಿಕೊಂಡಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 