ರುದ್ರಮುನಿ ಮಹಾಸ್ವಾಮಿಗಳವರ 42ನೇ ಪುಣ್ಯ ಸ್ಮರಣೋತ್ಸವ
42nd Commemoration of Rudramuni Mahaswamy
ಲೋಕದರ್ಶನ ವರದಿ
ಸವಣೂರ 22 : ಹತ್ತಿಮತ್ತೂರ ಗ್ರಾಮದ ವಿರಕ್ತಮಠದ ಲಿಂ.ಶ್ರೀ.ಮ.ನಿ.ಪ್ರ.ರುದ್ರಮುನಿ ಮಹಾಸ್ವಾಮಿಗಳವರ 42ನೇ ಪುಣ್ಯ ಸ್ಮರಣೋತ್ಸವ ನಿಮಿತ್ಯವಾಗಿ ಇಂದು (ದಿ,22) ಶುಕ್ರವಾರ ಬೆಳಿಗ್ಗೆ 10 ಘಂಟೆಯಿಂದ 4 ಘಂಟೆಯವರಿಗೆ ಹತ್ತಿಮತ್ತೂರಿನ ವಿರಕ್ತಮಠದಲ್ಲಿ ವಿರಕ್ತಮಠ,ಜಿಲ್ಲಾ ರಕ್ತನಿಧಿ ಘಟಕ ಹಾವೇರಿ,ತಾಲೂಕ ಸಾರ್ವಜನಿಕ ಆಸ್ಪತ್ರೆ-ರಕ್ತ ಶೇಖರಣಾ ಘಟಕ ಸವಣೂರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ-ಹಾವೇರಿ,ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ ಹಾಗೂ ರಕ್ತದಾನಿಗಳ,ಹತ್ತಿಮತ್ತೂರ ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು,ಹತ್ತಿಮತ್ತೂರಿನ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೃಹತ್ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ವಿರಕ್ತಮಠದ ಶ್ರೀ ಮ.ನಿ.ಪ್ರ ನಿಜಗುಣ ಶಿವಯೋಗಿಗಳು,ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಗೌರವ ಕಾರ್ಯಾಧ್ಯಕ್ಷರಾದ ಸಂಜೀವಕುಮಾರ ನೀರಲಗಿ,ರಕ್ತ ಶೇಖರಣಾ ಘಟಕದ ಪ್ರಯೋಗಶಾಲಾ ತಜ್ಞರಾದ ಮಾಲತೇಶ ಹೊಳೆಮ್ಮನವರ ಹಾಗೂ ಅಮ್ಮಾ ಸಂಸ್ಥೆಯ ನಿಂಗಪ್ಪ ಆರೇರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 