ರೈತನ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ
ಲೋಕದರ್ಶನ ವರದಿ
ಚಿಕ್ಕೋಡಿ 19: ಸಾಲ ತೀರಿಸಲಾಗದೆ ಆತ್ಮ ಹತ್ಯೆ ಮಾಡಿಕೊಂಡಿದ್ದ ರೈತನ ಪತ್ನಿಗೆ ಶಾಸಕ ಗಣೇಶ ಹುಕ್ಕೇರಿ ದಿ.18ರಂದು 5 ಲಕ್ಷ ರೂ. ಚೆಕ್ ವಿತರಿಸಿದರು.
ಇಂಗಳಿಯ ಮಹಾದೇವ ಶಿವಪ್ಪ ಅಂಬಿ (48) ಕಳೆದ ಜುಲೈ 4ರಂದು ಇಂಗಳಿ ಗ್ರಾಮದ ಮಳಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.
ವಯಕ್ತಿಕವಾಗಿ 5.49 ಲಕ್ಷ ರೂ. ಹಾಗೂ ಸಹೋದರ ಶಂಕರ ಶಿವಪ್ಪ ಅಂಬಿ ಜಂಟಿ ಖಾತೆಯಲ್ಲಿ 17 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಮಹಾದೇವ ಸಾಲ ತೀರಿಸಲಾಗದೆ ಅನೇಕ ದಿನಗಳಿಂದ ಚಿಂತಾಕ್ರಾಂತನಾಗಿದ್ದ.
ಮಹಾದೇವ ಹೆಸರಲ್ಲಿ ಉಗಾರ ಬುದ್ರುಕದಲ್ಲಿ 2 ಎಕರೆ ಮತ್ತು ಇಂಗಳಿಯಲ್ಲಿ ಜಂಟಿ ಖಾತೆಯಲ್ಲಿ 19 ಗುಂಟೆ ಮಾತ್ರ ಜಮೀನು ಇತ್ತು. ಪ್ರಕರಣವನ್ನು ಪರಿಶೀಲಿಸಿದ ಅಧಿಕಾರಿಗಳು ಆತನ ಆತ್ಮಹತ್ಯೆಗೆ ಸಾಲವಲ್ಲದೆ ಬೇರೆ ಯಾವುದೇ ಕರಣ ಇಲ್ಲ ಎನ್ನುವ ತೀಮರ್ಾನಕ್ಕೆ ಬಂದು 5 ಲಕ್ಷ ರೂ. ಮಂಜೂರು ಮಾಡಿದ್ದರು.
ಮೃತನ ಮನೆಗೆ ಸೋಮವಾರ ಸಂಜೆ ತೆರಳಿದ ಗಣೇಶ ಹುಕ್ಕೇರಿ, ರೈತನ ಪತ್ನಿ ಲತಾ ಮಹಾದೇವ ಅಂಬಿಗೆ 5 ಲಕ್ಷ ರೂ. ಚೆಕ್ ವಿತರಿಸಿದರು. ರೈತರು ಯಾವುದೇ ಸಂದರ್ಭದಲ್ಲಿ ಎದೆಗುಂದಬಾರದು. ಆತ್ಮಹತ್ಯೆಯಂತಹ ಕೃತ್ಯಕ್ಕೆ ಇಳಿಯಬಾರದು. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ರೈತರ ಕಷ್ಟಗಳಿಗೆ ಸದಾಕಾಲ ಸ್ಪಂದಿಸಲು ಸಿದ್ಧ ಎಂದು ಗಣೇಶ ಹುಕ್ಕೇರಿ ಧೈರ್ಯ ತುಂಬಿದರು. ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 