ಮಹಾರಾಷ್ಟ್ರ, ಮಧ್ಯಪ್ರದೇಶದ ಸರ್ಕಾರಗಳಿಂದ ತಲಾ 5 ಲಕ್ಷರೂ ಪರಿಹಾರ
ಮುಂಬೈ, ಮೇ 8,ರೈಲು ದುರಂತದಲ್ಲಿ ಮೃತಪಟ್ಟ ದುರ್ದೈವಿ ಕಾರ್ಮಿಕರ ಕುಟುಂಬಗಳಿಗೆ ಮಹಾರಾಷ್ಟ್ರ, ಮಧ್ಯಪ್ರದೇಶದ ಸರ್ಕಾರಗಳು ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿವೆ. ಮಹಾರಾಷ್ಟ್ರದ ಔರಂಗಬಾದ್ ಬಳಿ ರೈಲ್ವೆ ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 17 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಕುರಿತಂತೆ ಆಘಾತ ವ್ಯಕ್ತಪಡಿಸಿರುವ ಸಿಎಂ ಉದ್ಧವ್ ಠಾಕ್ರೆ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.ಮಧ್ಯಪ್ರದೇಶದ ವಲಸೆ ಕಾರ್ಮಿಕರು ನಡೆದುಕೊಂಡೇ ತಮ್ಮ ಊರು ತಲುಪಲು ನಿರ್ಧರಿಸಿ ರೈಲು ಹಳಿ ಮೇಲೆ ಸಾಗುತ್ತಿದ್ದರು. ನಡೆದು ನಡೆದು ಸುಸ್ತಾಗಿದ್ದ ಪರಿಣಾಮ ಕಳೆದ ರಾತ್ರಿ ರೈಲು ಹಳಿಯ ಮೇಲೆ ಮಲಗಿದ್ದರು. ಇಂದು ಮುಂಜಾನೆ ಔರಂಗಬಾದ್ ಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದು 17 ಮಂದಿ ಬಲಿಯಾಗಿದ್ದಾರೆ. ಇದೇ ವೇಳೆ, ಘನಟೆಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಕೂಡ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 