ಮಹಾರಾಷ್ಟ್ರ, ಮಧ್ಯಪ್ರದೇಶದ ಸರ್ಕಾರಗಳಿಂದ ತಲಾ 5 ಲಕ್ಷರೂ ಪರಿಹಾರ
ಮುಂಬೈ, ಮೇ 8,ರೈಲು ದುರಂತದಲ್ಲಿ ಮೃತಪಟ್ಟ ದುರ್ದೈವಿ ಕಾರ್ಮಿಕರ ಕುಟುಂಬಗಳಿಗೆ ಮಹಾರಾಷ್ಟ್ರ, ಮಧ್ಯಪ್ರದೇಶದ ಸರ್ಕಾರಗಳು ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿವೆ. ಮಹಾರಾಷ್ಟ್ರದ ಔರಂಗಬಾದ್ ಬಳಿ ರೈಲ್ವೆ ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 17 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಕುರಿತಂತೆ ಆಘಾತ ವ್ಯಕ್ತಪಡಿಸಿರುವ ಸಿಎಂ ಉದ್ಧವ್ ಠಾಕ್ರೆ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.ಮಧ್ಯಪ್ರದೇಶದ ವಲಸೆ ಕಾರ್ಮಿಕರು ನಡೆದುಕೊಂಡೇ ತಮ್ಮ ಊರು ತಲುಪಲು ನಿರ್ಧರಿಸಿ ರೈಲು ಹಳಿ ಮೇಲೆ ಸಾಗುತ್ತಿದ್ದರು. ನಡೆದು ನಡೆದು ಸುಸ್ತಾಗಿದ್ದ ಪರಿಣಾಮ ಕಳೆದ ರಾತ್ರಿ ರೈಲು ಹಳಿಯ ಮೇಲೆ ಮಲಗಿದ್ದರು. ಇಂದು ಮುಂಜಾನೆ ಔರಂಗಬಾದ್ ಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದು 17 ಮಂದಿ ಬಲಿಯಾಗಿದ್ದಾರೆ. ಇದೇ ವೇಳೆ, ಘನಟೆಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಕೂಡ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 