5ರೂ.ಗೆ ಊಟ, ತಿಂಡಿ ನೀಡುವ 'ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದ ಆಂಧ್ರ ಸಿಎಂ
ವಿಜಯವಾಡ 11: ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್, ಕನರ್ಾಟಕದಲ್ಲಿ ಇಂದಿರಾ ಕ್ಯಾಂಟೀನ್ ನಂತರ ಈಗ ಆಂಧ್ರಪ್ರದೇಶದಲ್ಲಿ ಕಡಿಮೆ ದರದಲ್ಲಿ ಆಹಾರ ಪೂರೈಸುವ 'ಅಣ್ಣಾ ಕ್ಯಾಂಟೀನ್ಗೆ ಬುಧವಾರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಚಾಲನೆ ನೀಡಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಇಂದು ವಿಜಯವಾಡದ ಭವಾನಿಪುರದಲ್ಲಿ ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದರು.
ವಿಜಯವಾಡದಲ್ಲಿ ಒಟ್ಟು 60 ಅಣ್ಣಾ ಕ್ಯಾಂಟೀನ್ಗೆ ಇಂದು ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ 203 ಕ್ಯಾಂಟೀನ್ ಸ್ಥಾಪಿಸುವ ಗುರಿ ಇದೆ ಎಂದು ಸಕರ್ಾರ ಪ್ರಕಟಣೆಯಲ್ಲಿ ತಿಳಿಸಿದೆ.
ನೂತನವಾಗಿ ಉದ್ಘಾಟನೆ ಯಾಗಿರುವ ಈ ಕ್ಯಾಂಟೀನ್ಗಳಲ್ಲಿ ಐದು ರೂಪಾಯಿಗಳಿಗೆ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟ ನೀಡಲಾಗುತ್ತದೆ. ಮೂರು ಇಡ್ಲಿ/ ಮೂರು ಪೂರಿ/ ಉಪ್ಪಿಟ್ಟು / ಪೊಂಗಲ್ ಅನ್ನು ಉಪಹಾರವಾಗಿ ನೀಡಿದರೆ, ಭೋಜನವಾಗಿ ಅನ್ನ ಸಾಂಬಾರ್, ದಾಲ್, ಉಪ್ಪಿನಕಾಯಿ, ಕರರ್ಿ ಮತ್ತು ಮೊಸರು ನೀಡಲಾಗುತ್ತಿದ್ದು, ಎಲ್ಲದ್ದಕ್ಕೂ ಒಂದೇ ದರ ನಿಗದಿಪಡಿಸಲಾಗಿದೆ.
ಬಡವರು ಕೇವಲ 15 ರುಪಾಯಿಗಳಲ್ಲಿ ದಿನದ ಮೂರು ಹೊತ್ತಿನ ಆಹಾರ ಪಡೆಯಬೇಕು ಎಂಬುದೇ ಈ ಕಾರ್ಯಕ್ರಮದ ಹಿಂದಿನ ಉದ್ದೇಶ ಎಂದು ಆಂಧ್ರಪ್ರದೇಶ ಸಚಿವ ಪಿ ನಾರಾಯಣ ಅವರು ತಿಳಿಸಿದ್ದಾರೆ.
ಯೋಜನೆಯ ಉಸ್ತುವಾರಿಯನ್ನು ಅಕ್ಷಯ ಪಾತ್ರ ಪ್ರತಿಷ್ಠಾನಕ್ಕೆ ನೀಡಲಾಗಿದೆ. ನಿತ್ಯ 2 ಲಕ್ಷ ಮಂದಿಗೆ ಆಹಾರ ಪೂರೈಸುವ ಉದ್ದೇಶವನ್ನು ಈ ಕಾರ್ಯಕ್ರಮ
ಹೊಂದಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 