5ರೂ.ಗೆ ಊಟ, ತಿಂಡಿ ನೀಡುವ 'ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದ ಆಂಧ್ರ ಸಿಎಂ
ವಿಜಯವಾಡ 11: ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್, ಕನರ್ಾಟಕದಲ್ಲಿ ಇಂದಿರಾ ಕ್ಯಾಂಟೀನ್ ನಂತರ ಈಗ ಆಂಧ್ರಪ್ರದೇಶದಲ್ಲಿ ಕಡಿಮೆ ದರದಲ್ಲಿ ಆಹಾರ ಪೂರೈಸುವ 'ಅಣ್ಣಾ ಕ್ಯಾಂಟೀನ್ಗೆ ಬುಧವಾರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಚಾಲನೆ ನೀಡಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಇಂದು ವಿಜಯವಾಡದ ಭವಾನಿಪುರದಲ್ಲಿ ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದರು.
ವಿಜಯವಾಡದಲ್ಲಿ ಒಟ್ಟು 60 ಅಣ್ಣಾ ಕ್ಯಾಂಟೀನ್ಗೆ ಇಂದು ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ 203 ಕ್ಯಾಂಟೀನ್ ಸ್ಥಾಪಿಸುವ ಗುರಿ ಇದೆ ಎಂದು ಸಕರ್ಾರ ಪ್ರಕಟಣೆಯಲ್ಲಿ ತಿಳಿಸಿದೆ.
ನೂತನವಾಗಿ ಉದ್ಘಾಟನೆ ಯಾಗಿರುವ ಈ ಕ್ಯಾಂಟೀನ್ಗಳಲ್ಲಿ ಐದು ರೂಪಾಯಿಗಳಿಗೆ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟ ನೀಡಲಾಗುತ್ತದೆ. ಮೂರು ಇಡ್ಲಿ/ ಮೂರು ಪೂರಿ/ ಉಪ್ಪಿಟ್ಟು / ಪೊಂಗಲ್ ಅನ್ನು ಉಪಹಾರವಾಗಿ ನೀಡಿದರೆ, ಭೋಜನವಾಗಿ ಅನ್ನ ಸಾಂಬಾರ್, ದಾಲ್, ಉಪ್ಪಿನಕಾಯಿ, ಕರರ್ಿ ಮತ್ತು ಮೊಸರು ನೀಡಲಾಗುತ್ತಿದ್ದು, ಎಲ್ಲದ್ದಕ್ಕೂ ಒಂದೇ ದರ ನಿಗದಿಪಡಿಸಲಾಗಿದೆ.
ಬಡವರು ಕೇವಲ 15 ರುಪಾಯಿಗಳಲ್ಲಿ ದಿನದ ಮೂರು ಹೊತ್ತಿನ ಆಹಾರ ಪಡೆಯಬೇಕು ಎಂಬುದೇ ಈ ಕಾರ್ಯಕ್ರಮದ ಹಿಂದಿನ ಉದ್ದೇಶ ಎಂದು ಆಂಧ್ರಪ್ರದೇಶ ಸಚಿವ ಪಿ ನಾರಾಯಣ ಅವರು ತಿಳಿಸಿದ್ದಾರೆ.
ಯೋಜನೆಯ ಉಸ್ತುವಾರಿಯನ್ನು ಅಕ್ಷಯ ಪಾತ್ರ ಪ್ರತಿಷ್ಠಾನಕ್ಕೆ ನೀಡಲಾಗಿದೆ. ನಿತ್ಯ 2 ಲಕ್ಷ ಮಂದಿಗೆ ಆಹಾರ ಪೂರೈಸುವ ಉದ್ದೇಶವನ್ನು ಈ ಕಾರ್ಯಕ್ರಮ
ಹೊಂದಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 