ನೆರೆ ಸಂತ್ರಸ್ತರಿಗೆ 50 ಸಾವಿರ ಸಹಾಯ
ಲೋಕದರ್ಶನ ವರದಿ
ರಾಣೇಬೆನ್ನೂರ24: ಸುಂದರಿನಗರಿ ಕೊಡಗಿನಲ್ಲಿ ಸಂಭವಿಸಿದ ಗುಡ್ಡಕುಸಿತ ಹಾಗೂ ನೆರೆಹಾವಳಿಗೆ ತುತ್ತಾದ ನಿರಾಶ್ರಿತರಿಗೆ ನಗರದ ಸ್ಥಳೀಯ ಬಂಟರ ಸಂಘ ಹಾಗೂ ಬಂಟ್ಸ್ ಕ್ರೇಡಿಟ್ ಸೌಹಾದರ್್ ಸಹಕಾರಿ ನಿಯಮಿತ ವತಿಯಿಂದ 50 ಸಾವಿರ ರೂಗಳ ಪರಿಹಾರದ ಚೆಕ್ನ್ನು ತಹಶೀಲ್ದಾರ ಗ್ರೇಡ್-2 ಶಂಕರ್ ಜಿ.ಎಸ್. ಅವರ ಮುಖಾಂತರ ಶುಕ್ರವಾರದಂದು ಕಳುಹಿಸಿಕೊಡಲಾಯಿತು.
ಬಂಟ್ಸ್ ಕ್ರೇಡಿಟ್ ಸೊಸೈಟಿ ಅಧ್ಯಕ್ಷ ಎಂ.ಅಪ್ಪುಶೆಟ್ಟಿ ಮಾತನಾಡಿ, ಹಿಂದೆಂದೂ ಕಂಡರಿಯದ ನೆರೆಹಾವಳಿಗೆ ತುತ್ತಾಗಿರುವ ಕೊಡುಗಿನ ನಿರಾಶ್ರಿತ ಜನರಿಗೆ ಸರ್ವರೂ ಮಾನವೀಯತೆ ಹಿತದೃಷ್ಟಿಯನ್ನಿಟ್ಟುಕೊಂಡು ಕೈಲಾದಷ್ಟು ಸಹಾಯದ ನೆರವು ನೀಡಬೇಕು. ಇದರಿಂದಾಗಿ ಅಲ್ಲಿನ ಜನತೆಗೆ ನಾವು ನೆರವು ನೀಡಿದಂತಾಗುತ್ತದೆ ಎಂದರು.
ರಾಜ್ಯದಲ್ಲಿ ಹಲವಾರು ಸಂಘ ಸಂಸ್ಥೆಗಳು, ಸೊಸೈಟಿಗಳು, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇಂತಹ ಘಟನೆಗಳಿಗೆ ಸ್ಪಂದಿಸಿ ಸಹಾಯದ ನೆರವು ನೀಡಬೇಕು. ಕೇವಲ ಸರಕಾರದ ಮೇಲೆ ಭಾರ ಹಾಕುವುದು ಸರಿಯಲ್ಲ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪರಿಹಾರ ನೀಡುವುದರ ಜೊತೆಗೆ ಅಲ್ಲಿನ ಜನತೆಗೆ ಶಾಶ್ವತ ಪರಿಹಾರ ಸಿಗುವಂತೆ ಸರ್ವರೂ ಪ್ರಾಮಾಣಿಕವಾಗಿ ಕೈಜೋಡಿಸಿದಾಗ ನಾವು ಒಳ್ಳೆಯ ಕೆಲಸ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಂಘದ ಅಧ್ಯಕ್ಷ ಹೆಚ್.ಜಯರಾಮ ಶೆಟ್ಟಿ, ಉಪಾಧ್ಯಕ್ಷ ಟಿ ಕೃಷ್ಣಶೆಟ್ಟಿ, ಗೌರವ ಅಧ್ಯಕ್ಷ ಬಿ.ಮಂಜುನಾಥ ಶೆಟ್ಟಿ, ಕಾರ್ಯದಶರ್ಿ ಅರುಣಕುಮಾರ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಾಂತರಾಮ ಹೆಗಡೆ, ಚಂದ್ರಶೇಖರ ಶೆಟ್ಟಿ, ರಾಮಚಂದ್ರಶೆಟ್ಟಿ, ರಾಘವೇಂದ್ರ ಎನ್ ಶೆಟ್ಟಿ, ಹೆಚ್ ರಾಘವೇಂದ್ರ ಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 