ಗಂಗೂಲಿಯಿಂದ 50 ಲಕ್ಷ ಮೌಲ್ಯದ ಅಕ್ಕಿ ದಾನ!
ನವದೆಹಲಿ, ಮಾ 26,ಕೊರೊನಾ-19 ವೈರಸ್ ಸೋಂಕಿನ ವಿರುದ್ಧದ ಭಾರತದ ಹೋರಾಟ ಮುಂದುವರಿದಿದೆ. ಈ ಮಧ್ಯೆ ಸಂಕಷ್ಟ ಹಾಗೂ ಅಗತ್ಯವಿರುವವರೆಗೆ ನೆರವಾಗಲು ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ ನೀಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ವಾಗ್ದಾನ ಮಾಡಿದ್ದಾರೆ. ಸುರಕ್ಷತೆ ಮತ್ತು ಭದ್ರತೆಗಾಗಿ ಸರಕಾರಿ ಶಾಲಾಕಟ್ಟದಲ್ಲಿರುವವರೆಗೆ ಸೌರವ್ ಗಂಗೂಲಿ ಮತ್ತು ಲಾಲ್ ಬಾಬೆ ರೈಸ್ ಅವರು ಸಮಾರು 50 ಲಕ್ಷ ರೂ. ಮೌಲ್ಯ ಅಕ್ಕಿಯನ್ನು ಕೊಡುವುದಾಗಿ ಹೇಳಿದ್ದಾರೆ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. "ಅಗತ್ಯವಿರುವವರಿಗೆ ಉಚಿತ ಅಕ್ಕಿ ನೀಡಲು ಲಾಲ್ ಬಾಬಾ ರೈಸ್ ಅವರೊಂದಿಗೆ ಸೌರವ್ ಗಂಗೂಲಿ, ಸುರಕ್ಷತೆ ಮತ್ತು ಭದ್ರತೆಗಾಗಿ ಸರ್ಕಾರಿ ಶಾಲೆಗಳಲ್ಲಿ50 ಲಕ್ಷ ರೂ. ಮೌಲ್ಯದ ಉಚಿತ ಅಕ್ಕಿ ನೀಡಲು ಮುಂದಾಗಿರುವುದು ಗಮನ ಸೆಳೆಯುತ್ತದೆ. ಗಂಗೂಲಿಯ ಈ ಉಪಕ್ರಮ ರಾಜ್ಯದ ಇತರ ನಾಗರಿಕರಿಗೆ ಸೇವೆ ಸಲ್ಲಿಸಲು ಇದೇ ರೀತಿಯ ಉಪಕ್ರಮಗಳನ್ನು ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದು ಭಾವಿಸುತ್ತೇವೆ, ಬಂಗಾಳ ಕ್ರಿಕೆಟ್ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 