ಗಂಗೂಲಿಯಿಂದ 50 ಲಕ್ಷ ಮೌಲ್ಯದ ಅಕ್ಕಿ ದಾನ!
ನವದೆಹಲಿ, ಮಾ 26,ಕೊರೊನಾ-19 ವೈರಸ್ ಸೋಂಕಿನ ವಿರುದ್ಧದ ಭಾರತದ ಹೋರಾಟ ಮುಂದುವರಿದಿದೆ. ಈ ಮಧ್ಯೆ ಸಂಕಷ್ಟ ಹಾಗೂ ಅಗತ್ಯವಿರುವವರೆಗೆ ನೆರವಾಗಲು ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ ನೀಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ವಾಗ್ದಾನ ಮಾಡಿದ್ದಾರೆ. ಸುರಕ್ಷತೆ ಮತ್ತು ಭದ್ರತೆಗಾಗಿ ಸರಕಾರಿ ಶಾಲಾಕಟ್ಟದಲ್ಲಿರುವವರೆಗೆ ಸೌರವ್ ಗಂಗೂಲಿ ಮತ್ತು ಲಾಲ್ ಬಾಬೆ ರೈಸ್ ಅವರು ಸಮಾರು 50 ಲಕ್ಷ ರೂ. ಮೌಲ್ಯ ಅಕ್ಕಿಯನ್ನು ಕೊಡುವುದಾಗಿ ಹೇಳಿದ್ದಾರೆ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. "ಅಗತ್ಯವಿರುವವರಿಗೆ ಉಚಿತ ಅಕ್ಕಿ ನೀಡಲು ಲಾಲ್ ಬಾಬಾ ರೈಸ್ ಅವರೊಂದಿಗೆ ಸೌರವ್ ಗಂಗೂಲಿ, ಸುರಕ್ಷತೆ ಮತ್ತು ಭದ್ರತೆಗಾಗಿ ಸರ್ಕಾರಿ ಶಾಲೆಗಳಲ್ಲಿ50 ಲಕ್ಷ ರೂ. ಮೌಲ್ಯದ ಉಚಿತ ಅಕ್ಕಿ ನೀಡಲು ಮುಂದಾಗಿರುವುದು ಗಮನ ಸೆಳೆಯುತ್ತದೆ. ಗಂಗೂಲಿಯ ಈ ಉಪಕ್ರಮ ರಾಜ್ಯದ ಇತರ ನಾಗರಿಕರಿಗೆ ಸೇವೆ ಸಲ್ಲಿಸಲು ಇದೇ ರೀತಿಯ ಉಪಕ್ರಮಗಳನ್ನು ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದು ಭಾವಿಸುತ್ತೇವೆ, ಬಂಗಾಳ ಕ್ರಿಕೆಟ್ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 