ಮುತ್ತಿನಂತ ಅತ್ತಿಗೆ ನಾಟಕದ 50ನೇ ಪ್ರದರ್ಶನ
50th performance of the play 'Muttinanta Attige'
ಲೋಕದರ್ಶನ ವರದಿ,
ಜಮಖಂಡಿ 13: ರಂಗಭೂಮಿ ಕಲಾವಿದರು ನೂರಾರು ಸಂಭಾಷಣೆಗಳನ್ನು ಕಂಠಪಾಠ ಮಾಡಿಕೊಂಡು ನೇರವಾಗಿ ಅಭಿನಯಿಸಬೇಕಾಗುತ್ತದೆ. ಆದ್ದರಿಂದ ರಂಗಭೂಮಿ ಕಲಾವಿದರ ಪ್ರತಿಭೆ ಅತ್ಯಂತ ವಿಶಿಷ್ಟವಾದದ್ದು ಎಂದು ಕಾಂಗ್ರೆಸ್ ಮುಖಂಡ ಸುಶೀಲಕುಮಾರ ಬೆಳಗಲಿ ಹೇಳಿದರು. ನಗರದಲ್ಲಿ ವಿಶ್ವಜ್ಯೋತಿ ಪಂಚಾಕ್ಷರ ನಾಟ್ಯ ಸಂಘ, ಜೇವರ್ಗಿ ವತಿಯಿಂದ ರಾಜಣ್ಣ ಜೇವರ್ಗಿ ರಚಿಸಿರುವ ‘ಮುತ್ತಿನಂತ ಅತ್ತಿಗೆ’ ನಾಟಕದ 50ನೇ ಪ್ರದರ್ಶನದ ವಿಶೇಷ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಅಶ್ಲೀಲತೆ ಮತ್ತು ಅಗ್ಗದ ಹಾಸ್ಯಕ್ಕೆ ಒತ್ತು ನೀಡುವ ನಾಟಕಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ರಾಜಣ್ಣ ಜೇವರ್ಗಿ ಅವರ ತಂಡ ಸಾಮಾಜಿಕ ಮೌಲ್ಯಗಳನ್ನು ಒಳಗೊಂಡ ನಾಟಕಗಳನ್ನು ಪ್ರದರ್ಶಿಸುತ್ತಿದೆ. ಮೌಲ್ಯಾಧಾರಿತ ಹಾಗೂ ಅಶ್ಲೀಲತೆಯಿಂದ ದೂರವಿರುವ ರಂಗಭೂಮಿ ಉಳಿಯಬೇಕಾದರೆ ಜನರು ಟಿಕೆಟ್ ಖರೀದಿಸಿ ನಾಟಕಗಳನ್ನು ವೀಕ್ಷಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದರು. ಅನೀಲ ಸಿಂಧೂರ, ಕಿರಣ ಕವಟಗೊಪ್ಪ ಮಾತನಾಡಿದರು, ಓಲೇಮಠದ ಆನಂದ ದೇವರು ಆಶೀರ್ವಚನ ನೀಡಿದರು. ಬಸವರಾಜ ಬಳಗಾರ ನಿರೂಪಿಸಿದರು. ಶಿವಾನಂದ ಕೊಣ್ಣೂರ ಸ್ವಾಗತಿಸಿದರು. ಸುಜಾತಾ ಗುಬ್ಬಿ ವಂದಿಸಿದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 