ಮಂದಿರ ನಿರ್ಮಾಣಕ್ಕಾಗಿ ವಕ್ಫ್ ಬೋರ್ಡ್ನಿಂದ 51 ಸಾವಿರ ರೂಪಾಯಿ ದೇಣಿಗೆ
ಲಕ್ನೋ ,ನ 15 : ಮಹತ್ವದ ಬೆಳವಣಿಗೆಯಲ್ಲಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಉತ್ತರಪ್ರದೇಶದ ಶಿಯಾ ವಕ್ಫ್ ಬೋರ್ಡ51 ಸಾವಿರ ರೂಪಾಯಿ ದೇಣಿಗೆ ನೀಡುವುದಾಗಿ ಪ್ರಕಟಿಸಿದೆ. ಮಂಡಳಿಯ ಅಧ್ಯಕ್ಷ ವಾಸಿಂ ರಿಝ್ಮಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು , ಸುಪ್ರೀಂಕೋರ್ಟ್ ತೀಪು ಸಾಧ್ಯವಾದ ರೀತಿಯಲ್ಲಿ ಉತ್ತಮ ತೀಪು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ. ಉತ್ತರಪ್ರದೇಶದ ಅಯೋಧ್ಯೆಯ ವಿವಾದ ಸ್ಥಳದಲ್ಲಿಯೇ ರಾಮಮಂದಿರ ನಿರ್ಮಾಣದ ಬಗ್ಗೆ ಸುಪ್ರೀಂಕೋರ್ಟ್ನ ಪಂಚಸದಸ್ಯ ಸಾಂವಿಧಾನಿಕ ಪೀಠ ಸರ್ವಾನುಮತದ ತೀರ್ಪನ್ನು ಪ್ರಕಟಿಸಿತ್ತು. ಅಲ್ಲದೇ ಮಸೀದಿ ನಿರ್ಮಾಣಕ್ಕಾಗಿ ಪ್ರತ್ಯೇಕವಾಗಿ 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್ಗೆ ನೀಡಬೇಕು ಎಂದು ಆದೇಶ ಮಾಡಿತ್ತು. ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನಿರ್ಮಾಣದ ಕಾರ್ಯ ನಡೆಯುತ್ತಿದೆ . ರಾಮ ಎಲ್ಲರಿಗೂ ಆದರ್ಶ ಪುರುಷ ಹೀಗಾಗಿ ನಾವು ಸಹ ರಾಮಮಂದಿರ ನಿರ್ಮಾಣಕ್ಕಾಗಿ ಸಹಾಯ ಹಸ್ತ ಚಾಚಿ, 51 ಸಾವಿರ ರೂಪಾಯಿ ದೇಣಿಗೆಯನ್ನು ನೀಡುವುದಾಗಿ ಹೇಳಿದ್ದಾರೆ . ಇದಕ್ಕೆ ಅಸ್ಸಾಂನ 21ವಿವಿದ ಮಸ್ಲಿಂ ಸಂಘಟನೆಗಳು ಮಂದಿರ ನಿರ್ಮಾಣ ಮಾಡಲು 5 ಲಕ್ಷರೂಪಾಯಿ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದ್ದವು ನಂತರ ಅದರ ಬೆನ್ನಲ್ಲೇ ಈಗ ಸುನ್ನಿ ಮಂಡಳಿ ನೆರವಿನ ಹಸ್ತಚಾಚಿದೆ.ಮಂದಿರ ನಿಮರ್ಾಣಕ್ಕೆ ಮುಸ್ಲಿಂ ಸಂಘಟನೆಗಳು ಕೈಜೊಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 