ಮಂದಿರ ನಿರ್ಮಾಣಕ್ಕಾಗಿ ವಕ್ಫ್ ಬೋರ್ಡ್ನಿಂದ 51 ಸಾವಿರ ರೂಪಾಯಿ ದೇಣಿಗೆ
ಲಕ್ನೋ ,ನ 15 : ಮಹತ್ವದ ಬೆಳವಣಿಗೆಯಲ್ಲಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಉತ್ತರಪ್ರದೇಶದ ಶಿಯಾ ವಕ್ಫ್ ಬೋರ್ಡ51 ಸಾವಿರ ರೂಪಾಯಿ ದೇಣಿಗೆ ನೀಡುವುದಾಗಿ ಪ್ರಕಟಿಸಿದೆ. ಮಂಡಳಿಯ ಅಧ್ಯಕ್ಷ ವಾಸಿಂ ರಿಝ್ಮಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು , ಸುಪ್ರೀಂಕೋರ್ಟ್ ತೀಪು ಸಾಧ್ಯವಾದ ರೀತಿಯಲ್ಲಿ ಉತ್ತಮ ತೀಪು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ. ಉತ್ತರಪ್ರದೇಶದ ಅಯೋಧ್ಯೆಯ ವಿವಾದ ಸ್ಥಳದಲ್ಲಿಯೇ ರಾಮಮಂದಿರ ನಿರ್ಮಾಣದ ಬಗ್ಗೆ ಸುಪ್ರೀಂಕೋರ್ಟ್ನ ಪಂಚಸದಸ್ಯ ಸಾಂವಿಧಾನಿಕ ಪೀಠ ಸರ್ವಾನುಮತದ ತೀರ್ಪನ್ನು ಪ್ರಕಟಿಸಿತ್ತು. ಅಲ್ಲದೇ ಮಸೀದಿ ನಿರ್ಮಾಣಕ್ಕಾಗಿ ಪ್ರತ್ಯೇಕವಾಗಿ 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್ಗೆ ನೀಡಬೇಕು ಎಂದು ಆದೇಶ ಮಾಡಿತ್ತು. ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನಿರ್ಮಾಣದ ಕಾರ್ಯ ನಡೆಯುತ್ತಿದೆ . ರಾಮ ಎಲ್ಲರಿಗೂ ಆದರ್ಶ ಪುರುಷ ಹೀಗಾಗಿ ನಾವು ಸಹ ರಾಮಮಂದಿರ ನಿರ್ಮಾಣಕ್ಕಾಗಿ ಸಹಾಯ ಹಸ್ತ ಚಾಚಿ, 51 ಸಾವಿರ ರೂಪಾಯಿ ದೇಣಿಗೆಯನ್ನು ನೀಡುವುದಾಗಿ ಹೇಳಿದ್ದಾರೆ . ಇದಕ್ಕೆ ಅಸ್ಸಾಂನ 21ವಿವಿದ ಮಸ್ಲಿಂ ಸಂಘಟನೆಗಳು ಮಂದಿರ ನಿರ್ಮಾಣ ಮಾಡಲು 5 ಲಕ್ಷರೂಪಾಯಿ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದ್ದವು ನಂತರ ಅದರ ಬೆನ್ನಲ್ಲೇ ಈಗ ಸುನ್ನಿ ಮಂಡಳಿ ನೆರವಿನ ಹಸ್ತಚಾಚಿದೆ.ಮಂದಿರ ನಿಮರ್ಾಣಕ್ಕೆ ಮುಸ್ಲಿಂ ಸಂಘಟನೆಗಳು ಕೈಜೊಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 