ಮುಂಡಗೋಡದಲ್ಲಿ 58 ದಿನಗಳ ಆತ್ಮೀಯ ವಾಸ ಅಂತ್ಯ: ದಲೈಲಾಮಾ ಧರ್ಮಶಾಲಾಗೆ ಪ್ರಯಾಣ
58 days of intimate stay in Mundagoda come to an end: Dalai Lama travels to Dharamshala
ಮುಂಡಗೋಡ 10 : ಟಿಬೆಟಿಯನ್ನರ ಪರಮೋಚ್ಚ ಧರ್ಮಗುರು ಹಾಗೂ ನೊಬೆಲ್ ಶಾಂತಿ ಪುರಸ್ಕೃತರಾದ ಪರಮಪೂಜ್ಯ ದಲೈಲಾಮಾ ಅವರು 58 ದಿನಗಳ ಸುದೀರ್ಘ ಮುಂಡಗೋಡ ಭೇಟಿಯನ್ನು ಸೋಮವಾರ ಮುಗಿಸಿ, ಬೆಳಿಗ್ಗೆ 6.50ಕ್ಕೆ ಮುಂಡಗೋಡ ಟಿಬೆಟಿಯನ್ ಕಾಲೋನಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಧರ್ಮಶಾಲಾಗೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಮಾರ್ಗದ ಎರಡು ಬದಿಗಳಲ್ಲಿ ನೆರೆದಿದ್ದ ಸಾವಿರಾರು ಭೌದ್ಧ ಅನುಯಾಯಿಗಳಿಗೆ ದಲೈಲಾಮಾ ಅವರು ಕೈಬೀಸಿ ಆಶೀರ್ವಾದ ನೀಡಿದರು. ಭಕ್ತರು ಭಾವುಕವಾಗಿ ತಮ್ಮ ಧರ್ಮಗುರುಗೆ ಬೀಳ್ಕೊಟ್ಟರು.
ಇದೇ ದಿನ ಬೆಳಿಗ್ಗೆ 8.30ಕ್ಕೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದಲ್ಲಿ ದೆಹಲಿ ತಲುಪಿದ ದಲೈಲಾಮಾ ಅವರು ಅಲ್ಲಿಂದ ಧರ್ಮಶಾಲಾಗೆ ತೆರಳಿದರು. ದಲೈಲಾಮಾ ಅವರ ಪ್ರಯಾಣದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಅವರ ನೇತೃತ್ವದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಜಿ. ಕೃಷ್ಣಮೂರ್ತಿ, ಡಿವೈಎಸ್ಪಿ ಗೀತಾ ಪಾಟೀಲ್, ತಹಶೀಲ್ದಾರ್ ಶಂಕರ್ ಗೌಡಿ, ಸಿಪಿಐ ರಂಗನಾಥ್ ನೀಲಮ ನವರ ಸೇರಿದಂತೆ ಪೊಲೀಸ್ ಹಾಗೂ ಆಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 