ಗೋಸ್ವಾಮಿ ನಾಗರಾಜ ಮಹಾಸ್ವಾಮಿಗಳ 5ನೇ ವರ್ಷದ ಪಾದಯಾತ್ರೆ
5th Annual Padayatra of Goswami Nagaraja Mahaswamy
ಬಳ್ಳಾರಿ 10: ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ 9ರಂದು ಭಾನುವಾರ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ ಕನಕ ದುರ್ಗಮ್ಮ ದೇವಸ್ಥಾನದಿಂದ ಜಾಲಿಬೆಂಚಿ ಗ್ರಾಮದ ಕೋದಂಡರಾಮ ದೇವಸ್ಥಾನದವರೆಗೆ 5ನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು.ಈ ಪಾದಯಾತ್ರೆಯಲ್ಲಿ ನೂರಾರು ಭಕ್ತಾದಿಗಳೊಂದಿಗೆ ತಾಳ ಮೇಳ ಭಜನೆಗಳ ವಾದ್ಯಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಗ್ರಾಮದೊಳಗೆ ತೆರಳಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಿದರು. ಹಮ್ಮಿಕೊಂಡ ವೇದಿಕೆ ಕಾರ್ಯಕ್ರಮದಲ್ಲಿ ಗೋಸ್ವಾಮಿ ನಾಗರಾಜ ಮಹಾಸ್ವಾಮಿಗಳವರಿಂದ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ 2025ನೇ ವರ್ಷದ ಕ್ಯಾಲೆಂಡರ್ನ್ನು ಬಿಡುಗಡೆ ಮಾಡಿದರು.
ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗೋಸ್ವಾಮಿ ನಾಗರಾಜ ಮಹಾಸ್ವಾಮಿಗಳವರು ಗ್ರಾಮಗಳಲ್ಲಿ ಸಕಲ ಕಾಲಕ್ಕೂ ಮಳೆ ಬೆಳೆ ಚೆನ್ನಾಗಿ ಬಂದು ರೈತರು ಎಲ್ಲೆಡೆ ಸಂತೋಷದಿಂದ ಇದ್ದು ಜನರು ನೆಮ್ಮದಿ ವಾತಾವರಣದಿಂದ ಬದುಕಲಿ ಎಂದು ಆಶೀರ್ವದಿಸಿದರು. ಮತ್ತು ಜಾಲಿಬೆಂಚಿ ಗ್ರಾಮವನ್ನು ಬಂಗಾರದ ಬೆಂಚೆ ಮಾಡುತ್ತೇನೆ ಎಂದು ಹೇಳಿದರು.
ಅದಕ್ಕಾಗಿ ಪ್ರತಿ ವರ್ಷ ಪಾದಯಾತ್ರೆ ಮೂಲಕ ಗ್ರಾಮಕ್ಕೆ ಆಗಮಿಸಿ ಸುತ್ತಮುತ್ತಲಿನಿಂದ ಗ್ರಾಮಗಳಿಂದ ಆಗಮಿಸುವ ಭಕ್ತಾದಿಗಳಿಗೆ ಆಶೀರ್ವದಿಸಿ ಶುಭ ಹಾರೈಸುತ್ತೇನೆ ಎಂದು ವೇದಿಕೆ ಮೇಲೆ ಸ್ವಾಮಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಸೈಯದ್ ಮಾನಸ ವಲಿ ಖಾದ್ರಿ ಹುಳುಕಲ್ಲು, ಸೈಯದ್ ಅಜರತ್ ಮೋಷನ್ ಖಾದ್ರಿ, ಮುತವಲ್ಲಿ ಸಜ್ಜದ ನಾಸಿನ್, ಹಜರತ್, ನರೇಂದ್ರಸ್ವಾಮಿ ಬಳ್ಳಾರಿ, ಬೆಂಗಳೂರು ಶಿವಲಿಂಗ ಎಲೆಕ್ಟ್ರಿಕಲ್, ಶಾಪುರ ಮಾಂತೇಶ ಉಲ್ಲೂರು, ತೆಕ್ಕಲಕೋಟೆ ಅಂಜಿನಪ್ಪ ಶರಣರು, ಹಾಗೂ ಊರಿನ ಮುಖಂಡರಾದ ಟಿ.ಮಲ್ಲಿಕಾರ್ಜುನ, ಬಾರಿಕರ ಹೊನ್ನೂರ ಸ್ವಾಮಿ, ನಾಗರೆಡ್ಡಿ, ಶೇಖಣ್ಣ, ರಾಧಾ ಗೌಡ, ತೋರಣಗಲ್ಲು ಗೋವಿಂದಪ್ಪ, ಸೇರಿದಂತೆ ಊರಿನ ಮುಖಂಡರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 