5ನೇ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸವರ್ಾಧ್ಯಕ್ಷರ ಮೆರವಣಿಗೆ
ಸಮ್ಮೇಳನದ ಸವರ್ಾಧ್ಯಕ್ಷ ಹಿರಿಯ ಸಾಹಿತಿ ಡಾ.ಬಿ.ಆರ್.ನಾಡಗೌಡ ಅವರ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಸಿಂದಗಿ 01: ತಾಲೂಕಿನ ಬೂದಿಹಾಳ ಪಿ.ಎಚ್.ಗ್ರಾಮದಲ್ಲಿ ದಿ.31ರಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಹಮ್ಮಿಕೊಂಡ 5ನೇ ಸಿಂದಗಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ಎಲ್ಲಿ ನೋಡಿದಲ್ಲಿ ಕನ್ನಡ ಜಾತ್ರೆಯ ಸಂಭ್ರಮ. ನಾಡದೇವಿ ಭಾವಚಿತ್ರದೊಂದಿಗೆ ಸಮ್ಮೇಳನದ ಸವರ್ಾಧ್ಯಕ್ಷ ಹಿರಿಯ ಸಾಹಿತಿ ಡಾ.ಬಿ.ಆರ್.ನಾಡಗೌಡ ಅವರ ಮೆರವಣಿಗೆ ಜರುಗಿತು. ಮಾರ್ಗದುದ್ದಕ್ಕೂ ತಳಿಲು ತೋರಣದಿಂದ ಅಲಂಕರಿಸಿ ನಾಡದೇವಿ ಭಾವಚಿತ್ರಕ್ಕೆ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಗ್ರಾಮಸ್ಥರು ಸ್ವಾಗತ ಕೋರಿದರು.
ಬಿಜೆಪಿ ಹಿರಿಯ ಧುರಿಣ ಚಂದ್ರಶೇಖರ ನಾಗೂರ ಅವರು ಮೆರವಣಿಗೆ ಚಾಲನೆ ನೀಡಿದರು. ಶಾಂತಗಂಗಾಧರ ಸ್ವಾಮಿಗಳು, ಶೈಲಶ್ರೀ ಪಟ್ಟಣಶೆಟ್ಟಿ, ಶಿಲ್ಪಾ ಕುದರಗೊಂಡ, ಶಾರದಾ ಮಂಗಳೂರ, ಸಿದ್ದಣ್ಣ ಚೌಧರಿ ಕನ್ನೊಳ್ಳಿ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಭಾಗವಹಿಸಿದ್ದರು.
ಮೆರವಣಿಗೆ ಉದ್ದಕ್ಕೂ ಕೊಕಟನೂರ ಗ್ರಾಮದ ಮಾರುತಿ ಕಲಾ ತಂಡ, ಹಂದಿಗನೂರ ಗ್ರಾಮದ ಕಸ್ತೂರಿಬಾ ವಸತಿ ಶಾಲೆ ಮಕ್ಕಳ ಡೊಳ್ಳು ಕುಣಿತ ತಂಡ, ಕಕ್ಕಳಮೇಲಿ ತಾಂಡಾ ಮಹಿಳಾ ತಂಡ ಸೇರಿದಂತೆ ವಿವಿಧ ಕಲಾ ತಂಡಗಳು ಕಲಾ ಪ್ರದರ್ಶನ ಮಾಡಿದರು. 250ಕ್ಕು ಹೆಚ್ಚು ಮಹಿಳೆಯರು ಕುಂಭ ಹೊತ್ತು ಕುಂಭ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 