ಕಳೆದ 2 ವರ್ಷಗಳಲ್ಲಿ ನೇಕಾರರಿಗೆ 616 ಕೋಟಿ ರೂ.ಸಾಲ ಮಂಜೂರು: ಸ್ಮೃತಿ ಇರಾನಿ
ನವದೆಹಲಿ, ಮಾರ್ಚ್ 20, ಮುದ್ರಾ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ ನೇಕಾರರಿಗೆ 616 ಕೋಟಿ ರೂ.ಗಳ ಸಾಲವನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಕೇಂದ್ರ ಜವಳಿ ಸಚಿವ ಸ್ಮೃತಿ ಇರಾನಿ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ. ಪೂರಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಸರ್ಕಾರಗಳು ಸಾಮಾನ್ಯವಾಗಿ ಕೇಂದ್ರಗಳ ಮುಂದೆ ಬೇಡಿಕೆಗಳನ್ನು ಇಡುತ್ತವೆ. ಇದರಿಂದ ರಾಜ್ಯಗಳ ಮೂಲಕ ನೇಕಾರರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವನ್ನು ಒದಗಿಸುತ್ತಿದೆ. ನೇಕಾರರು ಮತ್ತು ಕುಶಲಕರ್ಮಿಗಳಿಗೆ ಸಂಬಂಧಿಸಿದ ಸ್ಥಳೀಯ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಗಳು ಕೇಂದ್ರಕ್ಕೆ ತಿಳಿಸಬೇಕು ಎಂದು ಕೋರಿದ್ದಾರೆ.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ಇ-ವೇದಿಕೆಯಡಿ 1,300 ಕ್ಕೂ ಹೆಚ್ಚು ನೇಕಾರರನ್ನು ನೋಂದಾಯಿಸಲಾಗಿದೆ. ಅವರ ಉತ್ಪನ್ನಗಳನ್ನು 103 ಚಿಲ್ಲರೆ 'ಬ್ರಾಂಡ್ ಅಂಗಡಿಗಳ' ಮೂಲಕ ಮಾರಾಟ ಮಾಡಲಾಗುತ್ತಿದೆ. ಈ ಉತ್ಪನ್ನಗಳನ್ನು ಉತ್ತೇಜಿಸಲು ದೇಶ ಮತ್ತು ವಿದೇಶಗಳಲ್ಲಿ ಸುಮಾರು 600 ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಮಾರ್ಚ್ 23 ರಂದು ಸರ್ಕಾರದ ಇ-ಮಾರ್ಕೆಟ್ಪ್ಲೇಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಭೇಟಿಯಾಗುತ್ತಿರುವುದಾಗಿ ತಿಳಿಸಿದ ಸಚಿವರು, ಭೇಟಿಯ ವೇಳೆ ನೇಕಾರರಿಂದ ನೇರವಾಗಿ ಜಿಎಂ ಮೂಲಕ ಉತ್ಪನ್ನಗಳನ್ನು ಖರೀದಿಸುವ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಗುವುದು. ಮಧ್ಯವರ್ತಿಗಳಿಗೆ ಹೋಗುವ ದೊಡ್ಡ ಭಾಗಕ್ಕಿಂತ ಹೆಚ್ಚಾಗಿ ನೇಕಾರರಿಗೆ ಪೂರ್ಣ ಲಾಭ ಪಡೆಯುವುದಕ್ಕೆ ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 