ಏಳು ತಿಂಗಳು… ಏಳನೇ ಬಜೆಟ್ ಮಂಡನೆ…. !!!
ಬೆಂಗಳೂರು, ಮಾರ್ಚ್.5, ಕಳೆದ ಜುಲೈನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ 7 ತಿಂಗಳ ಅವಧಿ ಪೂರೈಸಿದ್ದಾರೆ. ಕಾಕತಾಳೀಯವೋ ಏನೋ ಎಂಬಂತೆ ಇಂದು ಏಳನೇ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತು, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಅವರು ಇಂದು ಏಳನೇ ಬಜೆಟ್ ಮಂಡನೆ ಮಾಡಿದ್ದಾರೆ. ಇನ್ನೊಂದು ವಿಶೇಷ ಎಂದರೆ ಹಳೆಯ ಮೈಸೂರು ಭಾಗದಿಂದ ಬಜೆಟ್ ಮಂಡನೆ ಮಾಡಿದ ರಾಜಕೀಯ ನಾಯಕರ ಪೈಕಿ ಯಡಿಯೂರಪ್ಪ ಅವರು 32ನೇ ಹಣಕಾಸು ಸಚಿವರಾಗಿದ್ದಾರೆ. ಎಸ್.ಎಂ ಕೃಷ್ಣ, ಮರಿಯಪ್ಪ, ಎಚ್.ಡಿ ದೇವೇಗೌಡ, ಬಿ.ಡಿ ಜತ್ತಿ,ನಿಜಲಿಂಗಪ್ಪ, ಮೊದಲಾದವರು ಸೇರಿದಂತೆ ಹಳೆಯ ಮೈಸೂರು ಭಾಗಕ್ಕೆ ಸೇರಿದ ನಾಯಕರಾಗಿದ್ದಾರೆ. ಕಳೆದ ಜುಲೈ 26 ರಂದು ಬಿಎಸ್ ಯಡಿಯೂರಪ್ಪ 4ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಮೊಟ್ಟ ಮೊದಲ ಕೃಷಿ ಬಜೆಟ್ ಮಂಡನೆ ಮಾಡಿದ ಕೀರ್ತಿ ಮತ್ತು ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 