ಏಳು ತಿಂಗಳು… ಏಳನೇ ಬಜೆಟ್ ಮಂಡನೆ…. !!!
ಬೆಂಗಳೂರು, ಮಾರ್ಚ್.5, ಕಳೆದ ಜುಲೈನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ 7 ತಿಂಗಳ ಅವಧಿ ಪೂರೈಸಿದ್ದಾರೆ. ಕಾಕತಾಳೀಯವೋ ಏನೋ ಎಂಬಂತೆ ಇಂದು ಏಳನೇ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತು, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಅವರು ಇಂದು ಏಳನೇ ಬಜೆಟ್ ಮಂಡನೆ ಮಾಡಿದ್ದಾರೆ. ಇನ್ನೊಂದು ವಿಶೇಷ ಎಂದರೆ ಹಳೆಯ ಮೈಸೂರು ಭಾಗದಿಂದ ಬಜೆಟ್ ಮಂಡನೆ ಮಾಡಿದ ರಾಜಕೀಯ ನಾಯಕರ ಪೈಕಿ ಯಡಿಯೂರಪ್ಪ ಅವರು 32ನೇ ಹಣಕಾಸು ಸಚಿವರಾಗಿದ್ದಾರೆ. ಎಸ್.ಎಂ ಕೃಷ್ಣ, ಮರಿಯಪ್ಪ, ಎಚ್.ಡಿ ದೇವೇಗೌಡ, ಬಿ.ಡಿ ಜತ್ತಿ,ನಿಜಲಿಂಗಪ್ಪ, ಮೊದಲಾದವರು ಸೇರಿದಂತೆ ಹಳೆಯ ಮೈಸೂರು ಭಾಗಕ್ಕೆ ಸೇರಿದ ನಾಯಕರಾಗಿದ್ದಾರೆ. ಕಳೆದ ಜುಲೈ 26 ರಂದು ಬಿಎಸ್ ಯಡಿಯೂರಪ್ಪ 4ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಮೊಟ್ಟ ಮೊದಲ ಕೃಷಿ ಬಜೆಟ್ ಮಂಡನೆ ಮಾಡಿದ ಕೀರ್ತಿ ಮತ್ತು ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 