ಶಾರದಾ ವಿದ್ಯಾ ಸಂಸ್ಥೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ
70th Karnataka Rajyotsava celebration at Sharada Vidya Sanstha
ಶಾರದಾ ವಿದ್ಯಾ ಸಂಸ್ಥೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ
ಗಂಗಾವತಿ 02 : ವಿದ್ಯಾನಗರ ಶಾರದಾ ವಿದ್ಯಾ ಸಂಸ್ಥೆ, ಗೊಟ್ಟಿಪಾಟಿ ವೆಂಕಟರತ್ನಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ತಾಯಿ ಭುವನೇಶ್ವರಿದೇವಿಯ ಪೂಜೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್ ಪ್ರಸಾದರವರು ಮಾತನಾಡಿ ಕನ್ನಡಾಂಬೆಯು ಎಲ್ಲಾ ಭಾಷಿಗರಿಗೂ ಜಾತಿ ಮತ ಭೇದವಿಲ್ಲದೆ ಆಶ್ರಯವನ್ನು ನೀಡಿರುತ್ತಾಳೆ ಈ ತಾಯಿಯ ಋಣವನ್ನು ನಾವು ತೀರಿಸಲು ಸಾಧ್ಯವಿಲ್ಲ ಎಂದು ಮನದಾಳದ ಮಾತನ್ನು ಹೇಳಿರುತ್ತಾರೆ.ಸಂಸ್ಥೆಯ ಸದಸ್ಯರಾದ ಗೊಟ್ಟಿಪಾಟಿ ರವಿಕುಮಾರ ರವರು ಮಾತನಾಡಿ ಈ ನಾಡಿನಲ್ಲಿ ಹುಟ್ಟಿರುವುದು ನಮ್ಮ ಪುಣ್ಯ, ಸಂಸ್ಕೃತಿ ಕಲೆ ಸಾಹಿತ್ಯಕ್ಕೆ ಹೆಸರಾಗಿರುವ ಈ ನಮ್ಮ ಕನ್ನಡ ನಾಡು ಮುಂದಿನ ಜನ್ಮದಲ್ಲಿ ಸಹ ಈ ನಾಡಿನಲ್ಲಿ ಜನಿಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರು ವಿಶ್ವನಾಥರಾಜು, ಕಾಂತಾರಾವ್, ಕಮ್ಮ ಕೋಟೆಶ್ವರರಾವ, ಎಸ್. ವೆಂಕಟೇಶ್ವರರಾವ, ಟಿ.ವಿ.ಸುಬ್ಬರಾವ್ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ವೈ ಸುದರ್ಶನ್ರಾವ್ ಹಾಗೂ ಶೈಕ್ಷಣಿಕ ಪ್ರಗತಿ ಪರೀಶೀಲಕರಾದ ಪಂಪನಗೌಡ, ಮುಖ್ಯೋಪಾಧ್ಯಾಯನಿ ಉದಯ ಶಿಕ್ಷಕವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 