ಎಸ್ಎಸ್ ವಿದ್ಯಾ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
77th Republic Day Celebrations at SS Vidya Sanstha
ತಾಳಿಕೋಟೆ 28: ಪಟ್ಟಣದ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಧ್ವಜಾರೋಹಣಕ್ಕೆ ಬಿಪಿಇಡಿ ಪ್ರಶಿಕ್ಷಣಾರ್ಥಿಗಳು ಪಥಸಂಚಲನದ ಮುಖಾಂತರ ಅಧ್ಯಕ್ಷರನ್ನು ಸ್ವಾಗತಿಸಿದರು. ಪಥಸಂಚಲನದ ನೇತೃತ್ವವನ್ನು ಪ್ರಾಚಾರ್ಯ ಶಿವಕುಮಾರ. ನಾಯಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಮ್.ಎಸ್.ರಾಯಗೊಂಡ ವಹಿಸಿದ್ದರು. ಧ್ವಜಾರೋಹಣವನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲರು ನೇರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ಆದರ್ಶ ವಿದ್ಯಾರ್ಥಿಗಳು ಆಗಬೇಕು ಹಾಗೂ ಶಿಕ್ಷಕರು ಆದರ್ಶ ಶಿಕ್ಷಕರಾಗಬೇಕುಮನೆ ಮನೆಯಲ್ಲಿ ಸೈನಿಕರು ದೇಶ ಸೇವೆಗಾಗಿ ಸಿದ್ಧರಾಗಬೇಕು ಎಂದು ಹೇಳಿದರು.
ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ, ವಿಜ್ಞಾನ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ರೆಡ್ಡಿ ಮತ್ತು ಸಂಗಮೇಶ್ವರ ಪ್ರೌಢಶಾಲೆಯ ಶಿಕ್ಷಕ ಎಸ್.ಸಿ.ಗುಡಗುಂಟಿ ಗಣರಾಜ್ಯೋತ್ಸವ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಪ್ರಾಚಾರ್ಯರಾದ ಡಾ:ಎಚ್.ಬಿ. ನಡುವಿನಕೇರಿ, ಶಿವಕುಮಾರ ನಾಯಕ, ವಿಜ್ಞಾನ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ರೆಡ್ಡಿ, ವಿರೇಶ ಕನಕ,ಅಶೋಕ ಕಟ್ಟಿ, ಜೆ.ಸಿ.ಪಾಟೀಲ, ಬಿ.ಆಯ್.ಹಿರೇಹೊಳಿ, ವಿದ್ಯಾಸಂಸ್ಥೆಯ ಸಮಸ್ತ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಬಿ.ಆಯ್. ಹಿರೇಹೊಳಿ ನಿರೂಪಿಸಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 