ಜು.10ರಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವ
7th anniversary of Sai Mandir on July 10th
ಕುಕನೂರು 04: ಪಟ್ಟಣದ ಗವಿಶ್ರೀ ನಗರದ ಶಿರಿಡಿ ಸಾಯಿ ಸೇವಾಶ್ರಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮಾ ಜು.10ರ ಗುರುವಾರದಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವದ ನಿಮಿತ್ಯ ವಿಶೇಷ ಪೂಜೆ ಮತ್ತು ಪ್ರಸಾದ ಸೇವೆ ಆಯೋಜಿಸಲಾಗಿದೆ ಎಂದು ಸೇವಾ ಟ್ರಸ್ಟ್ ತಿಳಿಸಿದೆ.ಅಂದು ಬೆಳಿಗ್ಗೆ 5.15 ಕ್ಕೆ ಶ್ರೀ ಶಿರಡಿ ಸಾಯಿಬಾಬಾರವರಿಗೆ ಕಾಕಡಾರತಿ, 6ಗಂಟೆಗೆ ಸುಪ್ರಭಾತ, 7 ಗಂಟೆಗೆ ವಿಷೇಶ ಅಭಿಷೇಕ,8ಗಂಟೆಗೆ ಬಾಬಾ ಅವರ ವಿರಾಟಸಾಯಿ ಸ್ತೋತ್ರ ಪಠಣ ಮತ್ತು ದೈನಂದಿನ ಪ್ರಾರ್ಥನೆ ಜರುಗುವುದು.10 ಗಂಟೆಗೆ ಸಾಯಿ ಭಕ್ತರಿಂದ ಗುರುಪೂರ್ಣಿಮೆಯ ವಿಶೇಷ ಬಾಬಾ ಅವರ ಭಜನೆಯ ಹಾಡುಗಳು ಹಾಗೂ ಪೂಜ್ಯ ಗುರುದೇವರು ಅಮ್ಮುಲ ಸಾಂಬಶಿವರಾವ್ ರವರು ರಚಿಸಿದ ಅಮ್ಮುಲ ಶಿರಡಿ ಸಾಯಿ ತತ್ವ ಬೋಧಾಮೃತಂ ಪುಸ್ತಕಗಳಿಂದ ಸತ್ಸಂಗ ಪ್ರಸಂಗಗಳು ನಡೆಯುವುದು.ಮಧ್ಯಾಹ್ನ 12ಗಂಟೆಗೆ ಮಧ್ಯಾಹ್ನದ ಆರತಿ.12.30 ಕ್ಕೆ ಸಾಯಿ ಚರಿತೆ. ನಂತರ ಮಧ್ಯಾಹ್ನ 1 ರಿಂದ ಪ್ರಸಾದ ವಿತರಣೆ ನಡೆಯುವುದು. ಸಾಯಂಕಾಲ 6.15 ಕ್ಕೆ ಆರತಿ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು ಎಂದು ಅಮ್ಮುಲ ಸಾಂಬ ಶಿವರಾವ್ ಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 