ಜು.10ರಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವ
7th anniversary of Sai Mandir on July 10th
ಕುಕನೂರು 04: ಪಟ್ಟಣದ ಗವಿಶ್ರೀ ನಗರದ ಶಿರಿಡಿ ಸಾಯಿ ಸೇವಾಶ್ರಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮಾ ಜು.10ರ ಗುರುವಾರದಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವದ ನಿಮಿತ್ಯ ವಿಶೇಷ ಪೂಜೆ ಮತ್ತು ಪ್ರಸಾದ ಸೇವೆ ಆಯೋಜಿಸಲಾಗಿದೆ ಎಂದು ಸೇವಾ ಟ್ರಸ್ಟ್ ತಿಳಿಸಿದೆ.ಅಂದು ಬೆಳಿಗ್ಗೆ 5.15 ಕ್ಕೆ ಶ್ರೀ ಶಿರಡಿ ಸಾಯಿಬಾಬಾರವರಿಗೆ ಕಾಕಡಾರತಿ, 6ಗಂಟೆಗೆ ಸುಪ್ರಭಾತ, 7 ಗಂಟೆಗೆ ವಿಷೇಶ ಅಭಿಷೇಕ,8ಗಂಟೆಗೆ ಬಾಬಾ ಅವರ ವಿರಾಟಸಾಯಿ ಸ್ತೋತ್ರ ಪಠಣ ಮತ್ತು ದೈನಂದಿನ ಪ್ರಾರ್ಥನೆ ಜರುಗುವುದು.10 ಗಂಟೆಗೆ ಸಾಯಿ ಭಕ್ತರಿಂದ ಗುರುಪೂರ್ಣಿಮೆಯ ವಿಶೇಷ ಬಾಬಾ ಅವರ ಭಜನೆಯ ಹಾಡುಗಳು ಹಾಗೂ ಪೂಜ್ಯ ಗುರುದೇವರು ಅಮ್ಮುಲ ಸಾಂಬಶಿವರಾವ್ ರವರು ರಚಿಸಿದ ಅಮ್ಮುಲ ಶಿರಡಿ ಸಾಯಿ ತತ್ವ ಬೋಧಾಮೃತಂ ಪುಸ್ತಕಗಳಿಂದ ಸತ್ಸಂಗ ಪ್ರಸಂಗಗಳು ನಡೆಯುವುದು.ಮಧ್ಯಾಹ್ನ 12ಗಂಟೆಗೆ ಮಧ್ಯಾಹ್ನದ ಆರತಿ.12.30 ಕ್ಕೆ ಸಾಯಿ ಚರಿತೆ. ನಂತರ ಮಧ್ಯಾಹ್ನ 1 ರಿಂದ ಪ್ರಸಾದ ವಿತರಣೆ ನಡೆಯುವುದು. ಸಾಯಂಕಾಲ 6.15 ಕ್ಕೆ ಆರತಿ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು ಎಂದು ಅಮ್ಮುಲ ಸಾಂಬ ಶಿವರಾವ್ ಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 