ಜು.10ರಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವ
7th anniversary of Sai Mandir on July 10th
ಕುಕನೂರು 04: ಪಟ್ಟಣದ ಗವಿಶ್ರೀ ನಗರದ ಶಿರಿಡಿ ಸಾಯಿ ಸೇವಾಶ್ರಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮಾ ಜು.10ರ ಗುರುವಾರದಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವದ ನಿಮಿತ್ಯ ವಿಶೇಷ ಪೂಜೆ ಮತ್ತು ಪ್ರಸಾದ ಸೇವೆ ಆಯೋಜಿಸಲಾಗಿದೆ ಎಂದು ಸೇವಾ ಟ್ರಸ್ಟ್ ತಿಳಿಸಿದೆ.ಅಂದು ಬೆಳಿಗ್ಗೆ 5.15 ಕ್ಕೆ ಶ್ರೀ ಶಿರಡಿ ಸಾಯಿಬಾಬಾರವರಿಗೆ ಕಾಕಡಾರತಿ, 6ಗಂಟೆಗೆ ಸುಪ್ರಭಾತ, 7 ಗಂಟೆಗೆ ವಿಷೇಶ ಅಭಿಷೇಕ,8ಗಂಟೆಗೆ ಬಾಬಾ ಅವರ ವಿರಾಟಸಾಯಿ ಸ್ತೋತ್ರ ಪಠಣ ಮತ್ತು ದೈನಂದಿನ ಪ್ರಾರ್ಥನೆ ಜರುಗುವುದು.10 ಗಂಟೆಗೆ ಸಾಯಿ ಭಕ್ತರಿಂದ ಗುರುಪೂರ್ಣಿಮೆಯ ವಿಶೇಷ ಬಾಬಾ ಅವರ ಭಜನೆಯ ಹಾಡುಗಳು ಹಾಗೂ ಪೂಜ್ಯ ಗುರುದೇವರು ಅಮ್ಮುಲ ಸಾಂಬಶಿವರಾವ್ ರವರು ರಚಿಸಿದ ಅಮ್ಮುಲ ಶಿರಡಿ ಸಾಯಿ ತತ್ವ ಬೋಧಾಮೃತಂ ಪುಸ್ತಕಗಳಿಂದ ಸತ್ಸಂಗ ಪ್ರಸಂಗಗಳು ನಡೆಯುವುದು.ಮಧ್ಯಾಹ್ನ 12ಗಂಟೆಗೆ ಮಧ್ಯಾಹ್ನದ ಆರತಿ.12.30 ಕ್ಕೆ ಸಾಯಿ ಚರಿತೆ. ನಂತರ ಮಧ್ಯಾಹ್ನ 1 ರಿಂದ ಪ್ರಸಾದ ವಿತರಣೆ ನಡೆಯುವುದು. ಸಾಯಂಕಾಲ 6.15 ಕ್ಕೆ ಆರತಿ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು ಎಂದು ಅಮ್ಮುಲ ಸಾಂಬ ಶಿವರಾವ್ ಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 