ಸಿಇಓ ಶಿಕ್ಷಣ ಪ್ರೇಮ ಮರಳಿ ಶಾಲೆಗೆ ದಾಖಲಾದ 8 ಮಕ್ಕಳು
ಬಾಗಲಕೋಟೆ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕರ ಅಧಿಕಾರಿಗಳ ನೇತೃತ್ವದಲ್ಲಿ ಶಾಲೆಯನ್ನು ಬಿಟ್ಟ 8 ಮಕ್ಕಳನ್ನು ಗುರುವಾರ ಮರಳಿ ಶಾಲೆಗೆ ಸೇರಿಸಲಾಯಿತು.
ಮಕ್ಕಳು ಶಿಕ್ಷಣದಿಂದ ವಂಚಿತರಾಗದೇ ಮತ್ತೆ ಶಾಲೆಗೆ ಸೇರಿಸಿ ಮುಖ್ಯವಾಹಿನಿಗೆ ಬರಬೇಕೆಂಬ ಆಶಯದಿಂದ ಜಿ.ಪಂ ನೇತೃತದಲ್ಲಿ ಬಾಗಲಕೋಟೆ ಸಮೀಪದ ವೀರಾಪೂರ (ಪು.ಕೆ) ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವರೆಗೆ ಕಲಿತು ಕಳೆದ 2 ವರ್ಷಗಳಿಂದ ಶಾಲೆಯಿಂದ 7 ವಿದ್ಯಾಥರ್ಿಗಳು ಹೊರಗುಳಿದಿದ್ದರು.
ಇದನ್ನು ತಿಳಿದ ಜಿ.ಪಂ ಸಿಇಓ ಅವರು ವಿದ್ಯಾಥರ್ಿಗಳ ಮನೆಗೆ ತೆರಳಿ ಪಾಲಕರು ಹಾಗೂ ವಿದ್ಯಾಥರ್ಿಗಳ ಮನ ಒಲಿಸಿ ಸಮೀಪದ ಸರಕಾರಿ ಪ್ರೌಢಶಾಲೆ ಸೀಮಿಕೇರಿಗೆ ದಾಖಲಿಸಲಾಯಿತು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ದಾಖಲಿಸುವ ಸಲುವಾಗಿ ಜಿಲ್ಲೆಯಾದ್ಯಂತ ಆಂದೋಲ ಕೈಗೊಂಡಿದ್ದು, ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ದಾಖಲಿಸಿ ಶಿಕ್ಷಣಾಬ್ಯಾಸ ಮುಂದುವರಿಸಲಾಗುತ್ತಿದೆ.
ಇದಕ್ಕಾಗಿ ಪಾಲಕ, ಪೋಷಕರ ಒತ್ತಾಸೆಯಾಗಿ ನಿಲ್ಲಬೇಕೆಂದು ಗಂಗೂಬಾಯಿ ಮಾನಕರ ಕೋರಿದರು. ಗದ್ದನಕೇರಿ, ವೀರಾಪೂರ, ಸೀಮಿಕೇರಿ ಮೊದಲಾದ ಗ್ರಾಮಗಳಲ್ಲಿ ಸಂಚಿಸಿ ಶಾಲೆ ಬಿಟ್ಟ ಒಟ್ಟು ಎಂಟು ಮಕ್ಕಳನ್ನು ಮರಳಿ ಶಾಲೆಗೆ ಕರೆತಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಬಿ.ಎಚ್.ಗೋನಾಳ, ಬಿಇಓ ದೊಡ್ಡಬಸಪ್ಪ ನೀರಲಕೇರಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಅಡಿವೆಪ್ಪ ಗೊಳಸಂಗಿ ಸೇರಿದಂತೆ ಮುಖ್ಯುಗುರುಗಳು ಹಾಜರಿದ್ದು, ಪಾಲಕರ ಮನ ಒಲಿಸಿ ಶಾಲೆಗೆ ದಾಖಲಿಸಲು ನೆರವಾದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 