ಕಿನ್ನಾಳ ಬಸ್ ನಿಲ್ದಾಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಿನ್ನಾಳ ಬಸ್ ನಿಲ್ದಾಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ  80th Independence Day celebration at Kinnala bus stand

ಕೊಪ್ಪಳ 16: ತಾಲೂಕಿನ ಕಿನ್ನಾಳ ಗ್ರಾಮದ ಕೆಕೆಆರ್ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.  ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರೆ​‍್ಣ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಪೂಜೆ ನೆರವೇರಿಸಿ ಧ್ವಜಾರೋಹಣ ಮಾಡಲಾಯಿತು.  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಸಿಹಿ ವಿತರಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮ ಹಂಚಿಕೊಳ್ಳಲಾಯಿತು.  ಈ ಸಂದರ್ಭದಲ್ಲಿ ಕಿನ್ನಾಳ ಬಸ್ ನಿಲ್ದಾಣದ ಮೇಲ್ವಿಚಾರಕ ಸತ್ಯನಾರಾಯಣ, ಅತ್ಯುತ್ತಮ ಚಾಲಕ ಸೇವೆಗಾಗಿ ಪ್ರಶಸ್ತಿಗೆ ಭಾಜನರಾದ ವಾಹನ ಚಾಲಕ ಹನುಮಂತಪ್ಪ ಮೇಟಿ, ನಿರ್ವಾಹಕ ಶಿವಪ್ಪ ಮನ್ನಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.