ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ 84ನೇ ಶಿವಜಯಂತಿ ಆಚರಣೆ
ಶಿಗ್ಗಾವಿ22: ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಕೂಡಾ ತುಂಬಾ ಪ್ರಮುಖ. ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯಾತ್ಮಿಕ ಪ್ರವಚನಗಳು, ಯೋಗ- ಧ್ಯಾನಗಳು ಅವಷ್ಯಕವಾಗಿವೆ ಅವುಗಳನ್ನು ಪಡೆಯಲು ಮಠ, ಮಂದಿರ, ಈಶ್ವರೀಯ ವಿಶ್ವ ವಿದ್ಯಾಲಯಗಳು ಸುಲಬ ಮಾರ್ಗವಾಗಿವೆ ಎಂದು ವಿರಕ್ತ ಮಠದ ಶ್ರೀ ಸಂಗನಬಸವ ಶ್ರೀಗಳು ಹೇಳಿದರು.
ಪಟ್ಟಣದ ಜೋಳದ ಪೇಟೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ದಲ್ಲಿ 84ನೇ ಶಿವಜಯಂತಿಯ ಅಂಗವಾಗಿ ಶಿವದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ಸುಲಬವಾಗಿ ಅರ್ಥವಾಗುವ ರೀತಿಯಲ್ಲಿ ಆದ್ಯಾತ್ಮಿಕ ಭೋಧನೆ ದ್ಯಾನ ನೀಡುವಲ್ಲಿ ವಿದ್ಯಾಲಯ ಕೂಡಾ ಪ್ರಮುಖವಾಗಿದೆ, ಎಲ್ಲರೂ ಒತ್ತಡಗಳ ನಡುವೆ ಸ್ವಲ್ಪ ಸಮಯ ಆಧ್ಯಾತ್ಮಿಕಕ್ಕೆ ಬಳಕೆ ಮಾಡಿಕೊಂಡು ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಟರಾಗಿ ಎಂದು ಸಲಹೆ ನೀಡಿದರು.
ವಿದ್ಯಾಲಯದಲ್ಲಿ ಶಿವಲಿಂಗ ಮೂತರ್ಿ ಹಾಗೂ ಲಕ್ಷ್ಮಿ ನಾರಾಯಣರ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮವನ್ನು ಈಶ್ವರೀಯ ಭೋಧಕರಾದ ಬಿ.ಕೆ.ಸುದಕ್ಕನವರ ನೇತೃತ್ವದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿರಕ್ತಮಠದ ಶ್ರೀ ಸಂಗನಬಸವ ಮಹಾಸ್ವಾಮಿಗಳು ನೆರವೇರಿಸಿ ಆಶೀರ್ವಚನ ನೀಡಿದರು. ಪುರಸಭೆ ಸದಸ್ಯರಾದ ಸುಭಾಸ ಚವ್ಹಾಣ, ದಯಾನಂದ ಅಕ್ಕಿ, ಸುಧೀರ ಮಾಳವದೆ, ಪ್ರಕಾಶ ಹಾದಿಮನಿ ಮೆರವಣಿಗೆ ಚಾಲನೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಬಿ.ಕೆ. ಭಾರತಿಅಕ್ಕ, ನಳಂದಾ ಶಾಲಾ ಶಿಕ್ಷಕರಾದ ಸಿ.ಎಸ್.ಚರಂತಿಮಠ, ಭಕ್ತಾದಿಗಳು ಹಾಗೂ ಈಶ್ವರೀಯ ಪರಿವಾರದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 