ಜುಗೂಳ ವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಂಘಕ್ಕೆ 88.99 ಲಕ್ಷ ರೂ. ನಿವ್ಹಳ ಲಾಭ..!
88.99 lakh rupees profit for Jugoola Vidhodeshala Primary Rural Agriculture Association..!
ಕಾಗವಾಡ 17: ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳು ರೈತರಿಗೆ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದೆಯೆಂದು ಚಿದಾನಂದ ಬಸವಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಹಾಗೂ ಸಂಘದ ಅಧ್ಯಕ್ಷ ಅಣ್ಣಾಸಾಬ ಪಾಟೀಲ ಹೇಳಿದರು.
ಅವರು, ಬುಧವಾರ ದಿ. 17 ರಂದು ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 106 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಸನ್ 2024-25 ನೇ ಸಾಲಿನಲ್ಲಿ ಸಂಘಕ್ಕೆ 88.99 ಲಕ್ಷ ರೂ. ನಿವ್ವಳ ಲಾಭವಾಗಿದ್ದು, ಸದಸ್ಯರಿಗೆ ಶೇ. 16 ರಷ್ಟು ಲಾಭಾಂಶ ವಿತರಿಸಲಾಗುವುದು. ಸಂಘದಲ್ಲಿ 51.69 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದ್ದು, 31.17 ಕೋಟಿ ರೂ. ಸಾಲ ವಿತರಿಸಲಾಗಿದ್ದು, 30.97 ಕೋಟಿ ರೂ. ಠೇವು ಸಂಗ್ರಹಿಸಿ, 2 ಕೋಟಿ ರೂ. ಶೇರ ಬಂಡವಾಳ ಹೊಂದಿದೆ. ಸ್ವಂತ ನಿಧಿಗಳು 5.13 ಕೋಟಿ ಹೊಂದಿದೆ ಎಂದ ಅವರು, ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸ್ತ್ರೀ ಶಕ್ತಿ ಸಂಘಗಳಿಗೆ 60.35 ಲಕ್ಷ ರೂ. ಸಾಲ ವಿತರಿಸಲಾಗಿದ್ದು, ರೈತರಿಗೆ ಗೊಬ್ಬರ ಸಾಲ 21 ಲಕ್ಷ ನೀಡಲಾಗುತ್ತಿದ್ದು, ಬೆಳೆಸಾಲ ವಸೂಲಾತಿ ಶೇ. 97ಅ ರಷ್ಟು ಹಾಗೂ ಬಿಡಿಪಿ ಸಾಲ ವಸೂಲಾತಿ ಶೇ. 91 ಅ ರಷ್ಟಿದ್ದು, ಅಡಿಟ್ ವರ್ಗ ಅ ಆಗಿದೆ ಎಂದರು.ಕಾರ್ಯಕ್ರಮದ ವಿದ್ಯಸಾನಿಧ್ಯವನ್ನು ಪರಮಾನಂದವಾಡಿಯ ಡಾ. ಅಭಿನಮವ ಬ್ರಹ್ಮಾನಂದ ಮಹಾಸ್ವಾಮಿಗಳು ವಹಿಸಿ, ಆಶೀರ್ವಚನ ನೀಡಿದರು.
ಈ ವೇಳೆ ಗ್ರಾಮದ ಸುಪುತ್ರ ರವೀಂದ್ರ ಪಾಟೀಲ ಅವರು, ಸಹಕಾರಿ ಸಂಘಗಳ ಉಪ ನಿಬಂಧಕರಾಗಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರನ್ನು ದಂಪತಿ ಸಹಿತ ಗ್ರಾಮದ ಪರವಾಗಿ ಸನ್ಮಾನಿಸಲಾಯಿತು. ಇದೇ ವೇಳೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಂ.ಸಿ. ಹೂಗಾರ ಮತ್ತು ತಾಲೂಕಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ದರೆಪ್ಪಾ ನಾಯಿಕ ಅವರನ್ನು ಮತ್ತು ಅಭಿಯಂತರ ರವಿ ಘಟಗೆ, ಕಿರಣ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸುಧಾಕರ ಗಣೇಶವಾಡಿ ವಹಿಸಿದ್ದರು. ಕಾರ್ಯ ನಿರ್ವಾಹಕ ರಾಜಕುಮಾರ ಹುನ್ನರಗೆ ವರದಿ ವಾಚನ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 