ಧಾರವಾಡ ಜಿಲ್ಲೆಯಲ್ಲಿ 9 “ಕೋವಿಡ್-19” ಪ್ರಕರಣ
ಧಾರವಾಡ ಮೇ.12,ಗುಜರಾತಿನ ಅಹಮದಾಬಾದ್ ನಗರದಿಂದ ಜಿಲ್ಲೆಗೆ ಆಗಮಿಸಿರುವ 09 ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಗುಜರಾತಿನಿಂದ ಆಗಮಿಸಿದ ಈ ಎಲ್ಲಾ ವ್ಯಕ್ತಿಗಳನ್ನು ಜಿಲ್ಲೆಯ ಆಗಮನ ಕೇಂದ್ರದಲ್ಲಿ ನೋಂದಿಯಿಸಿಕೊಂಡು ಪ್ರತ್ಯೇಕವಾಗಿ ಇರಿಸಲಾಗಿತ್ತು. ಬಂದ ಕೂಡಲೇ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸೋಂಕು ದೃಢಪಟ್ಟಿರುವದರಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೀಡಿತ - 879 ( 55 ) ,ಪೀಡಿತ -880 (31), ಪೀಡಿತ 881 ( 25), ಪೀಡಿತ -882 (70), ಪೀಡಿತ -883 (26), ಪೀಡಿತ -884 (18), ಪೀಡಿತ -885 (19), ಪೀಡಿತ -886 (20), ಪೀಡಿತ -887 (27) ಈ ಎಲ್ಲಾ ಒಂಬತ್ತು ಜನ ಪುರುಷರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವದರಿಂದ ಜಿಲ್ಲೆಯಲ್ಲಿ ಇದುವರೆಗೆ ಪ್ರಕರಣಗಳ ಸಂಖ್ಯೆ 21 ರಷ್ಟಾಗಿವೆ. ಪ್ರಕರಣವಾಗಿದೆ. ಈಗಾಗಲೇ 07 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 