ಅ. 6ರಂದು ಕೊಪ್ಪಳ ಜಿಲ್ಲಾ 10ನೇ ಚುಟುಕು ಸಾಹಿತ್ಯ ಸಮ್ಮೇಳನ
ಲೋಕದರ್ಶನ ವರದಿ
ಕೊಪ್ಪಳ 18: ಅಕ್ಟೋಬರ್ 6ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾ 10ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.
ಸಮ್ಮೇಳನದ ಅಧ್ಯಕ್ಷರನ್ನಾಗಿ ಚುಟುಕು ಕವಿ, ಕಲಾವಿದ ಹಾಗೂ ಕುಕನೂರಿನ ರಮಾಬಾಯಿ ಅಂಬೇಡ್ಕರ್ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾದ ಶಾಂತವೀರ ಬನ್ನಿಕೊಪ್ಪ ಆಯ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಕುಕನೂರು ತಾಲೂಕಿನ ಬನ್ನಿಕೊಪ್ಪದವರಾದ ಶಾಂತವೀರ ಬನ್ನಿಕೊಪ್ಪ ಅವರು 'ತುಂತುರು' ಕವನ ಸಂಕಲನ ಹೊರತರುವುದರ ಮೂಲಕ ಸಾಹಿತ್ಯ ಕ್ಷೇತ್ರ ಪ್ರವೇಶ ಮಾಡಿದರು. 'ಆಸರೆ' ಹನಿಗವನ ಸಂಕಲನ, 'ಕಲಾಸಿರಿ ಕವನಗಳ ಗರಿ' ಕವನ ಸಂಕಲನವನ್ನು ಹೊರತಂದಿದ್ದಾರೆ. ತಾವೇ ಸ್ವತಃ 'ಗವಿಗಂಗಾ ಪ್ರಕಾಶನ' ವನ್ನು ಹುಟ್ಟು ಹಾಕಿ ಅದರ ಮೂಲಕ ತಮ್ಮ ವಿದ್ಯಾಥರ್ಿಗಳು ಬರೆದ 'ಚಿಲಿಪಿಲಿ', 'ಮೌನ ಗೊಂಬೆಯ ಮಾತು', 'ಸಿಂಚನ' ಹನಿಗವನ ಸಂಕಲನಗಳನ್ನು ಮುದ್ರಿಸಿಕೊಟ್ಟಿದ್ದಾರೆ. ಹಾಗೆಯೇ ಇದೇ ಪ್ರಕಾಶನದಿಂದ 'ಹೊನಲಸಿರಿ', 'ಮೊದಲ ಹೆಜ್ಜೆ', 'ಸಂಚಲನ' ಹೊರತಂದಿದ್ದಾರೆ. ಇವರ ಸೇವೆಯನ್ನು ಗಮನಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯು 'ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ' ನೀಡಿ ಗೌರವಿಸಿದೆ.
ಸಮ್ಮೇಳನದಲ್ಲಿ ಭಾಗವಹಿಸುವ ಕವಿಗಳು ಸೆಪ್ಟಂಬರ್ 25ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. ವಿಳಾಸ: ಹನುಮಂತಪ್ಪ ಅಂಡಗಿ ಚಿಲವಾಡಗಿ, ಅಧ್ಯಕ್ಷರು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಅಂಚೆ ಪೆಟ್ಟಿಗೆ ಸಂಖ್ಯೆ-30, ಕೊಪ್ಪಳ-583231. ಸನಿಹವಾಣಿ: 9008944290.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 