ಅ. 6ರಂದು ಕೊಪ್ಪಳ ಜಿಲ್ಲಾ 10ನೇ ಚುಟುಕು ಸಾಹಿತ್ಯ ಸಮ್ಮೇಳನ
ಲೋಕದರ್ಶನ ವರದಿ
ಕೊಪ್ಪಳ 18: ಅಕ್ಟೋಬರ್ 6ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾ 10ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.
ಸಮ್ಮೇಳನದ ಅಧ್ಯಕ್ಷರನ್ನಾಗಿ ಚುಟುಕು ಕವಿ, ಕಲಾವಿದ ಹಾಗೂ ಕುಕನೂರಿನ ರಮಾಬಾಯಿ ಅಂಬೇಡ್ಕರ್ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾದ ಶಾಂತವೀರ ಬನ್ನಿಕೊಪ್ಪ ಆಯ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಕುಕನೂರು ತಾಲೂಕಿನ ಬನ್ನಿಕೊಪ್ಪದವರಾದ ಶಾಂತವೀರ ಬನ್ನಿಕೊಪ್ಪ ಅವರು 'ತುಂತುರು' ಕವನ ಸಂಕಲನ ಹೊರತರುವುದರ ಮೂಲಕ ಸಾಹಿತ್ಯ ಕ್ಷೇತ್ರ ಪ್ರವೇಶ ಮಾಡಿದರು. 'ಆಸರೆ' ಹನಿಗವನ ಸಂಕಲನ, 'ಕಲಾಸಿರಿ ಕವನಗಳ ಗರಿ' ಕವನ ಸಂಕಲನವನ್ನು ಹೊರತಂದಿದ್ದಾರೆ. ತಾವೇ ಸ್ವತಃ 'ಗವಿಗಂಗಾ ಪ್ರಕಾಶನ' ವನ್ನು ಹುಟ್ಟು ಹಾಕಿ ಅದರ ಮೂಲಕ ತಮ್ಮ ವಿದ್ಯಾಥರ್ಿಗಳು ಬರೆದ 'ಚಿಲಿಪಿಲಿ', 'ಮೌನ ಗೊಂಬೆಯ ಮಾತು', 'ಸಿಂಚನ' ಹನಿಗವನ ಸಂಕಲನಗಳನ್ನು ಮುದ್ರಿಸಿಕೊಟ್ಟಿದ್ದಾರೆ. ಹಾಗೆಯೇ ಇದೇ ಪ್ರಕಾಶನದಿಂದ 'ಹೊನಲಸಿರಿ', 'ಮೊದಲ ಹೆಜ್ಜೆ', 'ಸಂಚಲನ' ಹೊರತಂದಿದ್ದಾರೆ. ಇವರ ಸೇವೆಯನ್ನು ಗಮನಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯು 'ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ' ನೀಡಿ ಗೌರವಿಸಿದೆ.
ಸಮ್ಮೇಳನದಲ್ಲಿ ಭಾಗವಹಿಸುವ ಕವಿಗಳು ಸೆಪ್ಟಂಬರ್ 25ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. ವಿಳಾಸ: ಹನುಮಂತಪ್ಪ ಅಂಡಗಿ ಚಿಲವಾಡಗಿ, ಅಧ್ಯಕ್ಷರು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಅಂಚೆ ಪೆಟ್ಟಿಗೆ ಸಂಖ್ಯೆ-30, ಕೊಪ್ಪಳ-583231. ಸನಿಹವಾಣಿ: 9008944290.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 