ತಾಲೂಕಿನ ಉಪನ್ಯಾಸಕನಿಗೆ ಪಿಎಚ್‌.ಡಿ ಪದವಿ ಪ್ರಧಾನ

ತಾಲೂಕಿನ ಉಪನ್ಯಾಸಕನಿಗೆ ಪಿಎಚ್‌.ಡಿ ಪದವಿ ಪ್ರಧಾನ  A Ph.D degree is preferred for a Taluk Lecturer

ಶಿಗ್ಗಾವಿ 01 : ತಾಲೂಕಿನ ಶಿವಪುರ ತಾಂಡಾದ ನಿವಾಸಿ ಹಾಗೂ ಉಪನ್ಯಾಸಕ ಮಹೇಶ್ ಪಾಂಡಪ್ಪ ಲಮಾಣಿ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಯೋಗ ವಿಜ್ಞಾನದಲ್ಲಿ ಪಿಎಚ್‌.ಡಿ ಪದವಿ ಪ್ರದಾನ ಮಾಡಿದೆ.   ಇವರು ಎರಡು ವರ್ಷಗಳ ಕಾಲ ವಿದೇಶಗಳಲ್ಲಿ ಯೋಗ ಥೆರಪಿಸ್ಟ್‌ ಆಗಿ ಚೀನಾ ಮತ್ತು ವಿಯೆಟ್ನಾಂ ದೇಶಗಳಲ್ಲಿ ಸೇವೆ ಸಲ್ಲಿಸಿ, ನಂತರ ಹೆಚ್ಚಿನ ಅಧ್ಯಯನಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಶೋಧಕ ವಿದ್ಯಾರ್ಥಿಯಾಗಿ ಸೇರಿದ್ದರು.

ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಕೃಷ್ಣ ಶರ್ಮಾ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸರ ಮೇಲೆ ಯೋಗಾಭ್ಯಾಸದ ಪರಿಣಾಮ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಣದ ಮೌಲ್ಯಮಾಪನ ಎಂಬ ವಿಷಯದ ಮೇಲೆ ಮಹಾಪ್ರಬಂಧ ಸಲ್ಲಿಸಿದ್ದರು. ಈ ಮಹಾಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯವು ಯೋಗ ವಿಜ್ಞಾನದಲ್ಲಿ ಪಿಎಚ್‌.ಡಿ ಪದವಿಯನ್ನು ಪ್ರದಾನ ಮಾಡಿದೆ.