ನಡು ರಸ್ತೆಯಲ್ಲೇ ನಟಿಗೆ ಹಲ್ಲೆ ನಡೆಸಿದ ಕಾರು ಚಾಲಕ
ಮಂಗಳೂರು, ಫೆ.12,ಚಿತ್ರ ನಟಿಯೊಬ್ಬರಿಗೆ ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಪೆರುವಾಯಿ ಎಂಬಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಇದೀಗ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಫೆಬ್ರವರಿ 10ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಕನ್ನಡ, ತುಳು ಸಿನೆಮಾ ನಟಿಯಾಗಿರುವ ಶೋಭಿತಾ ಸಂಚರಿಸುತ್ತಿದ್ದ ಕಾರಿಗೆ ದಾರಿ ಬಿಟ್ಟು ಕೊಡುವ ವಿಚಾರವಾಗಿ ಈ ಘಟನೆ ನಡೆದಿದೆ. ದಾರಿ ಬಿಟ್ಟು ಕೊಡುವ ವಿಷಯದಲ್ಲಿ ಇನ್ನೊಂದು ಕಾರಿನವನ ಜೊತೆ ಶೋಭಿತಾ ತಗಾದೆ ತೆಗೆದಿದ್ದಾರೆ. ಇದೇ ವೇಳೆ ಎರಡು ಕಾರಿನವರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ನಡು ರಸ್ತೆಯಲ್ಲೇ ಹೊಯ್ ಕೈ ಹಂತಕ್ಕೆ ತಲುಪಿದೆ. ಶೋಭಿತಾ ಅವರ ಮೇಲೆ ಇನ್ನೊಂದು ಕಾರಿನಲ್ಲಿದ್ದವರು ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಶೋಭಿತಾ ಕೂಡ ಅವರಿಗೆ ಹಲ್ಲೆ ನಡೆಸುವ ದೃಶ್ಯ ವೀಡಿಯೋದಲ್ಲಿದೆ. ಆದರೆ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ,.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 