ನಡು ರಸ್ತೆಯಲ್ಲೇ ನಟಿಗೆ ಹಲ್ಲೆ ನಡೆಸಿದ ಕಾರು ಚಾಲಕ
ಮಂಗಳೂರು, ಫೆ.12,ಚಿತ್ರ ನಟಿಯೊಬ್ಬರಿಗೆ ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಪೆರುವಾಯಿ ಎಂಬಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಇದೀಗ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಫೆಬ್ರವರಿ 10ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಕನ್ನಡ, ತುಳು ಸಿನೆಮಾ ನಟಿಯಾಗಿರುವ ಶೋಭಿತಾ ಸಂಚರಿಸುತ್ತಿದ್ದ ಕಾರಿಗೆ ದಾರಿ ಬಿಟ್ಟು ಕೊಡುವ ವಿಚಾರವಾಗಿ ಈ ಘಟನೆ ನಡೆದಿದೆ. ದಾರಿ ಬಿಟ್ಟು ಕೊಡುವ ವಿಷಯದಲ್ಲಿ ಇನ್ನೊಂದು ಕಾರಿನವನ ಜೊತೆ ಶೋಭಿತಾ ತಗಾದೆ ತೆಗೆದಿದ್ದಾರೆ. ಇದೇ ವೇಳೆ ಎರಡು ಕಾರಿನವರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ನಡು ರಸ್ತೆಯಲ್ಲೇ ಹೊಯ್ ಕೈ ಹಂತಕ್ಕೆ ತಲುಪಿದೆ. ಶೋಭಿತಾ ಅವರ ಮೇಲೆ ಇನ್ನೊಂದು ಕಾರಿನಲ್ಲಿದ್ದವರು ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಶೋಭಿತಾ ಕೂಡ ಅವರಿಗೆ ಹಲ್ಲೆ ನಡೆಸುವ ದೃಶ್ಯ ವೀಡಿಯೋದಲ್ಲಿದೆ. ಆದರೆ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ,.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 