ಮದುವಣಗಿತ್ತಿಯಂತೆ ಶೃಂಗಾರ ಗೊಂಡ ಕಾರವಾರ
A caravan decorated like a bride
ಕಾರವಾರ, 21 : ಕರಾವಳಿ ಉತ್ಸವ 2025, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಕಾರವಾರ ಕಡಲತೀರ ಮದುವಣಗಿತ್ತಿಯಂತೆ ಶೃಂಗಾರ ಗೊಂಡಿದೆ. ಮೈಸೂರು ಯುವ ದಸರಾಕ್ಕೆ ಹಾಕುವ ವೇದಿಕೆ, ಲೈಟಿಂಗ್ ವ್ಯವಸ್ಥೆಯನ್ನು ಶನಿವಾರ ರಾತ್ರಿಯೇ ಸಜ್ಜುಗೊಳಿಸಲಾಗಿದೆ.
ಸರ್ಕಾರಿ ಕಚೇರಿ ಗೋಡೆಗಳು ಸಂಸ್ಕೃತಿ, ಪರಿಸರ ಜಾಗೃತಿ ಚಿತ್ರಗಳಿಂದ ಅಲಂಕೃತವಾಗಿವೆ. ಎಂಟು ವರ್ಷಗಳ ಸುದೀರ್ಘ ಬಿಡುವಿನ ನಂತರ ಹತ್ತು ಕೋಟಿ ವೆಚ್ಚದಲ್ಲಿ, ಏಳು ದಿನಗಳ ಕಾಲ ಸಾಂಸ್ಕೃತಿಕ ಉತ್ಸವ, ಬಾಲಿವುಡ್ , ಸ್ಯಾಂಡಲ್ ವುಡ್ ಗಾಯಕರಿಂದ ಕಡಲತೀರದಲ್ಲಿ ಸಂಗೀತದ ಅಲೆ ಏಳಲಿದೆ. ಕಾರವಾರ ಹಾಗೂ ಜಿಲ್ಲೆಯ ಪ್ರವಾಸೋದ್ಯಮ ಮೈಚಳಿ ಬಿಟ್ಟು ಕೊಡವಿ ನಿಂತಿದೆ. ಕಾರವಾರದ ಬೀದಿಗಳು ರೋಮಾಂಚನ ಗೊಂಡಿವೆ. ಜಿಲ್ಲೆಯ ಯುವಜನ ಹುಚ್ಚೆದ್ದು ಉತ್ಸವಕ್ಕೆ ಕಾಯುತ್ತಿದ್ದಾರೆ.
ಪಕ್ಕದ ಗೋವಾ ರಾಜ್ಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಜನ ಉತ್ಸವ ವೀಕ್ಷಿಸಲು ಆಗಮಿಸತೊಡಗಿದ್ದಾರೆ. ಡಿಸೆಂಬರ್ 22 ರಂದು ಅಪರಾಹ್ನ 4 ಗಂಟೆಗೆ ಸುಭಾಷಚಂದ್ರ ವೃತ್ತದಿಂದ ಮಯೂರ ವರ್ಮ ವೇದಿಕೆಯ ವರೆಗೆ 14 ಕಲಾ ತಂಡಗಳಿಂದ ಮೆರವಣಿಗೆ ಮೂಲಕ ಚಾಲನೆ ಸಿಗಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರವಿವಾರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ , ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ಉದ್ಘಾಟನೆ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಹಿರಿಯ ಶಾಸಕ ದೇಶಪಾಂಡೆ, ಶಾಸಕ ಸೈಲ್, ಶಾಸಕ ಭೀಮಣ್ಣ ಮೊದಲ ದಿನ ಗಾಯಕ ಶಂಕರ ಮಹಾದೇವನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 