ಕವಿವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಸಂತಾಪ ಸಭೆ
ಧಾರವಾಡ 10: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವರು, ಮಾಜಿ ರಾಜ್ಯಪಾಲರು ಆಗಿದ್ದ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಇಂದು ಕರ್ನಾಟಕ ವಿವಿ ಗಾಂಧಿ ಭವನದಲ್ಲಿ ಸಭೆ ಸೇರಿ ತೀವ್ರ ಸಂತಾಪ ಸಲ್ಲಿಸಲಾಯಿತು.
ಕುಲಸಚಿವ ಡಾ.ಎ.ಚೆನ್ನಪ್ಪ ಅವರು ಮಾತನಾಡಿ, ‘ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ವಿದೇಶಾಂಗ ಸಚಿವರಾಗಿ ದೇಶಕ್ಕೆ ಎಸ್.ಎಂ.ಕೃಷ್ಣ ಅವರ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು, ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾಗದ ಹಾನಿಯಾಗಿದೆ ಎಂದು ಹೇಳಿದರು.
ಪ್ರಭಾರ ಕುಲಪತಿ ಪ್ರೊ ಎಂ.ಬಿ.ಪಾಟೀಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೌಲ್ಯಮಾಪನ ಕುಲಸಚಿವ ಪ್ರೊ.ನಿಜಲಿಂಗಪ್ಪ ಮಟ್ಟಿಹಾಳ, ವಿತ್ತಾಧಿಕಾರಿ ಪ್ರೊ ಕೃಷ್ಣಮೂರ್ತಿ,ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಪ್ರೊ.ಎಸ್.ಕೆ.ಪವಾರ, ಜಿಮ್ಖಾನಾ ಅಧ್ಯಕ್ಷ ಪ್ರೊ.ಈಶ್ವರ ಬೈದರೆ, ಡಾ,ಚೇತನ,ಡಾ.ಪುಷ್ಪಾ ಹೊಂಗಲ್, ಪ್ರೊ.ವಿಶ್ವನಾಥ ಎಂ, ಪ್ರೊ.ಅರವಿಂದ ಮೂಲಿಮನಿ, ಪ್ರೊ.ಜೆ.ಎಂ.ಚಂದುನವರ ಉಪಸ್ಥಿತರಿದ್ದರು. ಮೃತರ ಗೌರವಾರ್ಥ ಎರಡು ನಿಮಿಷ ಮೌನಾಚರಣೆ ಆಚರಿಸಲಾಯಿತು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 