ಕವಿವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಸಂತಾಪ ಸಭೆ
ಧಾರವಾಡ 10: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವರು, ಮಾಜಿ ರಾಜ್ಯಪಾಲರು ಆಗಿದ್ದ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಇಂದು ಕರ್ನಾಟಕ ವಿವಿ ಗಾಂಧಿ ಭವನದಲ್ಲಿ ಸಭೆ ಸೇರಿ ತೀವ್ರ ಸಂತಾಪ ಸಲ್ಲಿಸಲಾಯಿತು.
ಕುಲಸಚಿವ ಡಾ.ಎ.ಚೆನ್ನಪ್ಪ ಅವರು ಮಾತನಾಡಿ, ‘ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ವಿದೇಶಾಂಗ ಸಚಿವರಾಗಿ ದೇಶಕ್ಕೆ ಎಸ್.ಎಂ.ಕೃಷ್ಣ ಅವರ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು, ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾಗದ ಹಾನಿಯಾಗಿದೆ ಎಂದು ಹೇಳಿದರು.
ಪ್ರಭಾರ ಕುಲಪತಿ ಪ್ರೊ ಎಂ.ಬಿ.ಪಾಟೀಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೌಲ್ಯಮಾಪನ ಕುಲಸಚಿವ ಪ್ರೊ.ನಿಜಲಿಂಗಪ್ಪ ಮಟ್ಟಿಹಾಳ, ವಿತ್ತಾಧಿಕಾರಿ ಪ್ರೊ ಕೃಷ್ಣಮೂರ್ತಿ,ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಪ್ರೊ.ಎಸ್.ಕೆ.ಪವಾರ, ಜಿಮ್ಖಾನಾ ಅಧ್ಯಕ್ಷ ಪ್ರೊ.ಈಶ್ವರ ಬೈದರೆ, ಡಾ,ಚೇತನ,ಡಾ.ಪುಷ್ಪಾ ಹೊಂಗಲ್, ಪ್ರೊ.ವಿಶ್ವನಾಥ ಎಂ, ಪ್ರೊ.ಅರವಿಂದ ಮೂಲಿಮನಿ, ಪ್ರೊ.ಜೆ.ಎಂ.ಚಂದುನವರ ಉಪಸ್ಥಿತರಿದ್ದರು. ಮೃತರ ಗೌರವಾರ್ಥ ಎರಡು ನಿಮಿಷ ಮೌನಾಚರಣೆ ಆಚರಿಸಲಾಯಿತು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 