ಉತ್ತಮ ಪರಿಸರದಿಂದ ಅತ್ಯುತ್ತಮ ಜೀವನ ಸಾಧ್ಯ: ಶಿವಲಿಂಗ ಸಿದ್ನಾಳ
A good environment is the best way to live: Shivalinga Sidnal
ಲೋಕದರ್ಶನ ವರದಿ
ಮಹಾಲಿಂಗಪುರ 06 : ನಮ್ಮ ಸುತ್ತಲಿನ ಪರಿಸರ ಉತ್ತಮವಾಗಿದ್ದರೆ ಜೀವನ ಕೂಡ ಅತ್ಯುತ್ತಮವಾಗಿರುತ್ತದೆ ಎಂದು ಮಹಾಲಿಂಗಪುರ ಕೆಎಲ್ಇ ಕಾಲೇಜಿನ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು.
ಸಮೀಪದ ನಾಗರಾಳ ಗ್ರಾಮದ ಬನದವಸ್ತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮ ಜೀವನದ ಮೇಲೆ ಸುತ್ತಲಿನ ನೈಸರ್ಗಿಕ ಪರಿಸರ ಮತ್ತು ಸಾಮಾಜಿಕ ಪರಿಸರ ತುಂಬಾ ಪ್ರಭಾವ ಬೀರುತ್ತದೆ. ಆದ್ದರಿಂದ ಮಕ್ಕಳು ಗಿಡ ಮರ ಬೆಳೆಸಿ, ನದಿ ತೊರೆ ಉಳಿಸುವ ಮೂಲಕ ನೈಸರ್ಗಿಕ ಪರಿಸರವನ್ನು ಹಾಗೂ ಉತ್ತಮರ ಸ್ನೇಹ, ಸಹವಾಸ ಮಾಡುವ ಮೂಲಕ ಸಾಮಾಜಿಕ ಪರಿಸರ ಉತ್ತಮವಾಗಿರಿಸಿಕೊಳ್ಳಬೇಕು ಎಂದರು.
ಹಿರಿಯ ಶಿಕ್ಷಕ ವಿ.ಡಿ.ಬಂಡಿ ಮಾತನಾಡಿ, ತೋಟದ ಶಾಲೆಯಾದರೂ ಯಾವುದೇ ಕೊರತೆ ಇಲ್ಲದಂತೆ ಕಂಗೊಳಿಸುತ್ತಿರುವ ಶಾಲೆಯಲ್ಲಿ ಮಕ್ಕಳ ಕೈದೋಟ ಮತ್ತು ಉದ್ಯಾನ ಮತ್ತಷ್ಟು ಮೆರಗು ತಂದಿದ್ದು, ಇಲ್ಲಿನ ಪರಿಸರ ಪ್ರೇಮಕ್ಕೆ ನಿದರ್ಶನವಾಗಿದೆ ಎಂದರು.
ಹಿರಿಯರಾದ ಮುತ್ತಪ್ಪಜ್ಜ ಒಡೆಯರ, ಯಮನಪ್ಪ ನಾಗರಾಳ, ಎಸ್ಡಿಎಂಸಿ ಅಧ್ಯಕ್ಷ ಹನಮಂತ ಒಡೆಯರ, ಗ್ರಾಪಂ ಸದಸ್ಯ ಮಲ್ಲು ಜಗದಾಳ, ಹಿರಿಯ ಶಿಕ್ಷಕ ವಿ.ಡಿ.ಬಂಡಿ, ಸಹಶಿಕ್ಷಕ ಪಿ.ಆರ್.ಮಲ್ಲಾರಿ, ಮುಖ್ಯ ಶಿಕ್ಷಕ ಜಯಪ್ರಕಾಶ ಆನೂರ, ಪಿಡಿಒ ರಂಜಿತಾ ಹತ್ತಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 