ಜಾನಪದ ಕಲಾ ಸೊಬಗಿನೊಂದಿಗೆ ತಾಯಿ ಭುವನೇಶ್ವರಿ ದೇವಿ ಭವ್ಯ ಮೆರವಣಿಗೆ
A grand procession of Mother Bhuvaneshwari Devi with the beauty of folk art
ಸಾಂಸ್ಕೃತಿಕ ವೈವಿಧ್ಯತೆಗೆ ಸಾಕ್ಷಿಯಾದ ಜಾನಪದ ಕಲಾ ಸೊಬಗು
ವಿಜಯನಗರ ಫೆ.15: ಹಂಪಿ ಉತ್ಸವದ ಅಂತಿಮ ದಿನವಾದ ಭಾನುವಾರ ಸಂಜೆ ಉದ್ದಾನ ವೀರಭದ್ರೇಶ್ವರ ದೇವಸ್ಥಾದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜಾನಪದ ವಾಹಿನಿ ಮೆರವಣಿಗೆ ನಡೆಯಿತು.
ಶಾಸಕ ಹೆಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ ಗಣ್ಯರು ಮೆರವಣಿಗೆಯಲ್ಲಿ ಪಾಗ್ಗೊಂಡು ವಿರೂಪಾಕ್ಷೇಶ್ವರ ದೇವಾಲಯದ ಬಳಿ ನಾಡದೇವಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಜಾನಪದ ವಾಹಿನಿ ಕಲಾ ತಂಡಗಳ ಮೆರವಣಿಗೆ ನಾಡಿನ ಗ್ರಾಮೀಣ ಭಾಗದ ಸಾಂಸ್ಕೃತಿಕ ವೈವಿಧ್ಯತೆಗೆ ಸಾಕ್ಷಿಯಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಜಾನಪದ ಕಲಾತಂಡಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದವು. ಜಾನಪದ ಕಲಾ ಸೊಬಗಿನೊಂದಿಗೆ ತಾಯಿ ಭುವನೇಶ್ವರಿ ದೇವಿಯನ್ನು ಮೆರವಣಿಗೆ ಮಾಡಲಾಯಿತು.
ಹಲಗೆವಾದನ, ವೀರಗಾಸೆ, ಹಗಲುವೇಷ, ಸಿಂಧೋಳ್ ಕುಣಿತ, ನಂದಿಧ್ವಜ, ಕಹಳೆ ವಾದನ, ಹಕ್ಕಿಪಿಕ್ಕಿ ನೃತ್ಯ, ಕರಡಿ ಮೇಳ, ಪುರವಂತಿಕೆ, ಪೂಜಾ ಕುಣಿತ, ನಗಾರಿ, ಲಂಭಾಣಿ ವೃತ್ತ, ಕಂಸಾಳೆ, ಚಂಡೆವಾದ್ಯ, ಸೋಮನ ಕುಣಿತ, ಗೊರವರ ಕುಣಿತ, ಕಲಾತಂಡಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದವು. ಉಪವಿಭಾಗಾಧಿಕಾರಿ ವಿವೇಕ್, ತಹಶೀಲ್ದಾರ್ ಶೃತಿ, ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 