ಹಾಲುಮತ ಸಮಾಜದಿಂದ ಭಕ್ತ ಕನಕದಾಸರ ಭವ್ಯ ಮೆರವಣಿಗೆ
A grand procession of devotees of Kanakadasa from Halumatha Samaj
ಕಂಪ್ಲಿ 16: ಪಟ್ಟಣದ ಹಾಲುಮತ ಸಮಾಜದಿಂದ ಭಕ್ತ ಕನಕದಾಸರ 535ನೇ ಜಯಂತ್ಯೋತ್ಸವ ಸಡಗರ ಸಂಭ್ರಮದಿಂದ ರವಿವಾರ ಆಚರಿಸಲಾಯಿತು. ಇಲ್ಲಿನ ಸಾಂಗತ್ರಯ ಪಾಠಶಾಲೆ ಆರಂಭಗೊಂಡ ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅದ್ದಪ್ಪ ಗುಡಿವರೆಗೆ ತೆರಳಿ, ತದನಂತರ ಬೀರಲಿಂಗೇಶ್ವರ ಗುಡಿಹತ್ತಿರ ಸಮಾವೇಶಗೊಂಡಿತು. ತಾಷಾರಾಂಡೋಲ್, ಡೊಳ್ಳು ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ತಂಡದ ಡೊಳ್ಳು ಪ್ರದರ್ಶನ ಮೆರವಣಿಗೆ ಮೆರಗು ನೀಡುವ ಜೊತೆಗೆ ಜನರ ಆಕರ್ಷಣೆಗೆ ಪಾತ್ರರಾದರು. ಮೆರವಣಿಗೆಯದ್ದಕ್ಕೂ ಯುವಕರು ಕುಣಿದು ಸಂಭ್ರಮಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಕ್ತ ಕನಕದಾಸರ ಜಯಂತಿ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಜೆ.ಎನ್ ಗಣೇಶ ಹಾಲುಮತ ಸಮಾಜದ ನಗರ ಘಟಕ ಅಧ್ಯಕ್ಷ ಕೆ.ವಸಂತಕುಮಾರ, ಉಪಾಧ್ಯಕ್ಷ ಕುರಿ ಸಿದ್ದಪ್ಪ, ಖಜಾಂಚಿ ಬಿ.ಶೇಖರ, ಮುಖಂಡರಾದ ಕೆ.ಯಮ್ಮನೂರ್ಪ, ಕೆ.ಹರಿನಾಥ, ಕುರಿ ಹುಸೇನಪ್ಪ, ನೆಲ್ಲೂಡಿ ವಿರೇಶಪ್ಪ ಶಿವಪುರ ರಮೇಶ ಮುತ್ತಣ ಬೀರಲಿಂಗ ವಿರುಪಣ್ಣ ಬಿ.ಲಕ್ಷ್ಮಣ, ಕುರಿ ಮಂಜುನಾಥ, ಬಳ್ಳಾಪುರ ಲಿಂಗಪ್ಪ ಕೋಟ್ಟಾಲ್ಸುಧ ಬಿಂಗಿ ವೆಂಕಟೇಶ ಕುಮಾರ ಬಲಕುಂದಿ ರಾಜಶೇಖರ, ಕೆ.ರಂಗಪ್ಪ ಮೈಲಾರಿ ಯಲ್ಲಪ್ಪ, ಸೇರಿದಂತೆ ಅನೇಕರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 