ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ
A grand welcome for a retired soldier
ಇಂಡಿ 01: ತಮ್ಮ ಜೀವನದ ಅಮೂಲ್ಯ 24 ವರ್ಷಗಳ ಕಾಲ ತಾಯಿ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ತವರೂರಿಗೆ ಮರಳುತ್ತಿರುವ ಇಂಡಿ ತಾಲೂಕಿನ ಲೋಣಿ ಕೆ.ಡಿ ಗ್ರಾಮದ ಸತೀಶ ಗುರವ ಅವರನ್ನು ಇಂಡಿ ನಗರದ ಸಾರ್ವಜನಿಕರು ಬಸವೇಶ್ವರ ವೃತ್ತದಲ್ಲಿ ಬರಮಾಡಿಕೊಂಡು ಹೃದಯಸ್ಪರ್ಶಿಯಾಗಿ ಸತ್ಕರಿಸಿ ಗೌರವಿಸಿದರು.
ನಗರದಲ್ಲಿ ಸಂಭ್ರಮವೋ ಸಂಭ್ರಮ, ಅದ್ದೂರಿ ಮೆರವಣಿಗೆ, ಇದು ಯಾವ ಸಿನಿಮಾ ಸ್ಟಾರ್ಗೆ ಸಿಕ್ಕ ಸ್ವಾಗತ ಅಲ್ಲ, ಯುದ್ಧಭೂಮಿಯಲ್ಲಿ 24 ವರ್ಷದಿಂದ ಸೇವೆ ಸಲ್ಲಿಸಿದ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಸಿಕ್ಕಿತು. ಯೋಧನಾಗಿ ಕಳೆದ 24 ವರ್ಷದಿಂದ ಸೇನೆಯಲ್ಲಿ ಕೆಲಸ ಮಾಡಿ ತಮ್ಮ ಸ್ವಗ್ರಾಮಕ್ಕೆ ಬಂದಾಗ ಸ್ಥಳೀಯರು ಭವ್ಯ ಸ್ವಾಗತ ಕೋರಿ ವೀರ ಯೋಧನನ್ನು ಬರಮಾಡಿಕೊಂಡರು.ನಗರದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ವಾಹನದಲ್ಲಿ ಭವ್ಯ ಮೆರವಣಿಗೆಯಲ್ಲಿ ವಿಶ್ವಗುರು ಬಸವಣ್ಣನವರ ವೃತ್ತದಲ್ಲಿ ಆಗಮಿಸಿದ ಯೋಧನಿಗೆ ಹೂ ಮಾಲೆ ಹಾಕಿ ಸ್ವಾಗತ ಕೋರಿದರು.
ಬಾಳು ಮುಳಜಿ ಶಿರಶ್ಯಾಡ, ಧನರಾಜ ಮುಜಗೂಂಡ, ರಾಮಸಿಂಗ ಕನ್ನೊಳ್ಳಿ, ರವಿಗೌಡ ಪಾಟೀಲ, ಭೀಮನಗೌಡ ಪಾಟೀಲ (ತಡವಲಗಾ), ಸಿದ್ದಪ್ಪ ಗುನ್ನಾಪೂರ, ಆನಂದ ಕಾಂಬಳೆ, ಜಗದೀಶ ಬಗಲಿ, ವಿಲಾಸ ಉಮರ್ಜಿ, ಈರಣ್ಣ ಮುಜಗೂಂಡ, ಆನಂದ ಗಣಾಚಾರಿ, ಸಂಗಮೇಶ ಗುರವ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 