ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ
A grand welcome for retired soldiers
ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ
ರಾಣೇಬೆನ್ನೂರು 04: ಸಿ.ಆರ್.ಪಿ.ಎಫ್. ನಲ್ಲಿ ಸುದೀರ್ಘ 35 ವರ್ಷ 05 ತಿಂಗಳು ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಆಗಮಿಸಿದ ಸಿ.ಆರ್.ಪಿ.ಎಫ್ ಯೋಧ ಮೆಡ್ಲೇರಿ ಗ್ರಾಮದ ನಾಗಪ್ಪ ಭಜಂತ್ರಿಯವರನ್ನು ವಿವಿಧ ರೈತಪರ, ಕನ್ನಡಪರ ಸಂಘಟನೆಗಳು ಮತ್ತು ತಾಲೂಕಾ ಶ್ರೀ ಶಿವಶರಣ ಶ್ರೀ ನೂಲಿಯ ಚಂದಯ್ಯ ಕೊರಮ ಸಮಾಜದ ವತಿಯಿಂದ ನಗರದ ಕೇಂದ್ರ ಬಸ್ನಿಲ್ದಾಣದಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಎಫ್. ಪಾಟೀಲ ಹಸಿರು ಶಾಲು ಹೊದಿಸುವ ಮೂಲಕ ವೀರ ಯೋಧನಿಗೆ ಸತ್ಕರಿಸಿದರು. ಕೊರಮ ಸಮಾಜದ ತಾಲೂಕಾ ಅಧ್ಯಕ್ಷರಾದ ಅರುಣುಕುಮಾರ ಕೆ. ಕೊರಗರ ಇದೇ ಸಂದರ್ಭದಲ್ಲಿ ಸಮಾಜದ ವತಿಯಿಂದ ವೀರ ಯೋಧನಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳು ವೀರ ಯೋಧನನ್ನು ಸತ್ಕರಿಸಿದರು. ಮೆರವಣಿಗೆ ಕೇಂದ್ರ ಬಸ್ ನಿಲ್ದಾಣದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊನೆಗೆ ಸ್ವ ಗ್ರಾಮ ಮೆಡ್ಲೇರಿಗೆ ಕರೆದುಕೊಂಡು ಹೋಗಲಾಯಿತು. ಈ ಕಾರ್ಯಕ್ರಮದಲ್ಲಿ ರಮೇಶ ಹೂಲಿಹಳ್ಳಿ, ರೇವಣಪ್ಪ ಕೊರವರ, ಗಂಗಪ್ಪ ಭಜಂತ್ರಿ, ನಾಗರಾಜ ಕೊರವರ, ಚಂದ್ರು ಕೊರವರ, ನೂರಂದಪ್ಪ ಭಜಂತ್ರಿ, ರಾಘವೇಂದ್ರ ಭಜಂತ್ರಿ, ಹನುಮಂತಪ್ಪ ಭಜಂತ್ರಿ, ಮಂಜುನಾಥ ಕೊರವರ, ಶೇಖಪ್ಪ ಭಜಂತ್ರಿ, ಪರಶುರಾಮ ಕಬ್ಬೂರ, ಶ್ರೀಕಾಂತ ಕೊರವರ, ಅನೀಲ ಮೇಲಿನಮನಿ ಮತ್ತಿತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 